ಮಂಗಳೂರು, : ನಗರದ ತಣ್ಣೀರುಬಾವಿ ಬಳಿಯ ತೋಟ ಬೆಂಗರೆ ಎಂಬಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಏಳು ಮಂದಿ ಭಾಗಿಯಾಗಿದ್ದು ಆರು ಮಂದಿಯನ್ನು ಬಂಧಿಸಲಾಗಿದೆ.
ನವೆಂಬರ್ 18ರಂದು ಈ ಘಟನೆ ನಡೆದಿದ್ದು, ಯುವತಿ ನೀಡಿದ ದೂರಿನ ಮೇಲೆ ಇಂದು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ದೂರಿನ ಹಿನ್ನೆಲೆಯಲ್ಲಿ ಕಾರ್ಯಚರಿಸಿದ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರಿನ ತೋಟ ಬೆಂಗ್ರೆ ಕಡಲ ತೀರಕ್ಕೆ ವಿಹಾರಕ್ಕಾಗಿ ಬಂದಿದ್ದ ಬಂಟ್ವಾಳ ಮೂಲದ ಯುವಜೋಡಿ ಮೇಲೆ ಏಳು ಮಂದಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಯುವತಿಯನ್ನು ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂದು ಆರೋಪಿಸಲಾಗಿದೆ. ವಾರದ ಹಿಂದೆ ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳದ ಸಮೀಪದ ಯುವತಿ ಕಾರ್ಖಾನೆ ಯೊಂದರಲ್ಲಿ ಕೂಲಿಗೆ ಹೋಗುತ್ತಿದ್ದಳು. ಆಕೆ ತನ್ನ ಸ್ನೇಹಿತನೊಂದಿಗೆ ನ.18ರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತೋಟ ಬೆಂಗರೆಗೆ ಬಂದಿದ್ದಳು.ಅಲ್ಲಿ ಇಬ್ಬರೂ ಒಟ್ಟಾಗಿ ಹೋಗುತ್ತಿದ್ದಾಗ ತಂಡವೊಂದು ಅಡ್ಡಗಟ್ಟಿ ಇಬ್ಬರನ್ನೂ ಬೆದರಿಸಿದ್ದಾರೆ. ಅಲ್ಲದೆ ಯುವಕನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ಎಳೆದೊಯ್ದು ದೌರ್ಜನ್ಯ ನಡೆಸಿದ್ದಾರೆ. ಏಳು ಮಂದಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಯುವತಿ ಪೊಲೀಸರ ಬಳಿ ಹೇಳಿಕೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ರನ್ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್ನ ಸರ್ದಾರ್ ವಲ್ಲಭಭಾಯಿ ಪಟೇಲ್…
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …