ಮಂಗಳೂರು, : ನಗರದ ತಣ್ಣೀರುಬಾವಿ ಬಳಿಯ ತೋಟ ಬೆಂಗರೆ ಎಂಬಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಏಳು ಮಂದಿ ಭಾಗಿಯಾಗಿದ್ದು ಆರು ಮಂದಿಯನ್ನು ಬಂಧಿಸಲಾಗಿದೆ.
ನವೆಂಬರ್ 18ರಂದು ಈ ಘಟನೆ ನಡೆದಿದ್ದು, ಯುವತಿ ನೀಡಿದ ದೂರಿನ ಮೇಲೆ ಇಂದು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ದೂರಿನ ಹಿನ್ನೆಲೆಯಲ್ಲಿ ಕಾರ್ಯಚರಿಸಿದ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರಿನ ತೋಟ ಬೆಂಗ್ರೆ ಕಡಲ ತೀರಕ್ಕೆ ವಿಹಾರಕ್ಕಾಗಿ ಬಂದಿದ್ದ ಬಂಟ್ವಾಳ ಮೂಲದ ಯುವಜೋಡಿ ಮೇಲೆ ಏಳು ಮಂದಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಯುವತಿಯನ್ನು ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂದು ಆರೋಪಿಸಲಾಗಿದೆ. ವಾರದ ಹಿಂದೆ ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳದ ಸಮೀಪದ ಯುವತಿ ಕಾರ್ಖಾನೆ ಯೊಂದರಲ್ಲಿ ಕೂಲಿಗೆ ಹೋಗುತ್ತಿದ್ದಳು. ಆಕೆ ತನ್ನ ಸ್ನೇಹಿತನೊಂದಿಗೆ ನ.18ರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತೋಟ ಬೆಂಗರೆಗೆ ಬಂದಿದ್ದಳು.ಅಲ್ಲಿ ಇಬ್ಬರೂ ಒಟ್ಟಾಗಿ ಹೋಗುತ್ತಿದ್ದಾಗ ತಂಡವೊಂದು ಅಡ್ಡಗಟ್ಟಿ ಇಬ್ಬರನ್ನೂ ಬೆದರಿಸಿದ್ದಾರೆ. ಅಲ್ಲದೆ ಯುವಕನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ಎಳೆದೊಯ್ದು ದೌರ್ಜನ್ಯ ನಡೆಸಿದ್ದಾರೆ. ಏಳು ಮಂದಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಯುವತಿ ಪೊಲೀಸರ ಬಳಿ ಹೇಳಿಕೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…