ಮಂಗಳೂರು: ಬೀದಿಗಳಲ್ಲಿ ಅನಾಥವಾಗಿರುವ ಶ್ವಾನಗಳನ್ನು ಮನೆಗೆ ಕರೆತಂದು ಆಹಾರ ನೀಡಿ ಪೋಷಿಸುವ ಕಾಯಕದಲ್ಲಿ ತೊಡಗಿರುವ ಮಂಗಳೂರಿನ ರಜನಿ ದಾಮೋದರ ಶೆಟ್ಟಿ ಅವರನ್ನು ಮಹಿಳಾ ದಿನಾಚರಣೆಯಂದು ಹೊಸದಿಲ್ಲಿಯ ಡೆಲ್ಲಿ ಕಮಿಷನ್ ಫಾರ್ ವುಮೆನ್ ಸಂಸ್ಥೆಯ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು.
ಸನ್ಮಾನದ ದ್ಯೋತಕವಾಗಿ 50,000 ರೂ. ನಗದು ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಸನ್ಮಾನಕ್ಕೆ ಪ್ರತಿಕ್ರಿಯೆ ನೀಡಿದ ರಜನಿ ದಾಮೋದರ ಶೆಟ್ಟಿ ಅವರು, ಮೌನವಾಗಿ ಮಾಡುತ್ತಿದ್ದ ಕೆಲಸವನ್ನು ಗುರುತಿಸಿ ಸನ್ಮಾನಿಸಿದ್ದಕ್ಕೆ ಧನ್ಯವಾದಗಳು. ಈ ಸನ್ಮಾನವು ನನಗೆ ಶ್ವಾನಗಳ ರಕ್ಷಣೆ ಕೆಲಸದಲ್ಲಿ ಇನ್ನಷ್ಟು ಸ್ಪೂರ್ತಿ ನೀಡಿದೆ ಎಂದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…