KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಮಂಗಳೂರು : ಸಕಲೇಶಪುರ ಘಾಟ್ ಸೆಕ್ಷನ್ ನಲ್ಲಿ ವಿದ್ಯುಧೀಕರಣ ಪೂರ್ಣಗೊಂಡ ಬೆನ್ನಲ್ಲೇ ಇದೀಗ ಮಂಗಳೂರು ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಆಗ್ರಹ ಕೇಳಿಬಂದಿದೆ.
ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಬೆಂಗಳೂರು ನಡುವೆ ಪ್ರತಿದಿನ 3 ವಂದೇ ಭಾರತ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವೀನ್ ವೈಷ್ಣವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರು ಮತ್ತು ಬೆಂಗಳೂರು ಕರ್ನಾಟಕದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳು. ಮಂಗಳೂರನ್ನು ಬೆಂಗಳೂರಿಗೆ ಪರ್ಯಾಯವಾದ ಅತ್ಯಾಧುನಿಕ ಉದ್ಯೋಗ ಮತ್ತು ಕೈಗಾರಿಕಾ ತಾಣವನ್ನಾಗಿ ರೂಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಆದರೆ, ಈ ಎರಡು ನಗರಗಳ ನಡುವಿನ ವೇಗದ ಸಾರಿಗೆ ಸಂಪರ್ಕದ ಕೊರತೆಯು ಈ ಬೆಳವಣಿಗೆಗೆ ದೊಡ್ಡ ಅಡ್ಡಿಯಾಗಿದೆ.
ಪ್ರಸ್ತುತ ಸಾವಿರಾರು ಉದ್ಯಮಿಗಳು ಮತ್ತು ವೃತ್ತಿಪರರು ಕೇವಲ ಕೆಲವೇ ಗಂಟೆಗಳ ಕೆಲಸಕ್ಕಾಗಿ ರಾತ್ರಿ ಪೂರ್ತಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇದೆ. ಇದು ನಮ್ಮ ಶ್ರಮಜೀವಿ ಜನರಿಗೆ ಆಗುತ್ತಿರುವ ಅನ್ಯಾಯ.
ಈ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಜನಸಾಮಾನ್ಯರ ಅನುಕೂಲಕ್ಕಾಗಿ ಈ ಕೆಳಗಿನಂತೆ ವಂದೇ ಭಾರತ್ ರೈಲುಗಳನ್ನು ಆರಂಭಿಸಲು ಕೋರಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಅದರಂತೆ, ಮಂಗಳೂರಿನಿಂದ ಬೆಂಗಳೂರಿಗೆ ಪ್ರತಿದಿನ 03 ವಂದೇ ಭಾರತ್ ರೈಲುಗಳ ಸೇವೆ ಒದಗಿಸುವಂತೆ ಉಲ್ಲೇಖಿಸಿದ್ದೇನೆ.
ಈ ರೈಲು ಸಂಪರ್ಕವು ಕೇವಲ ಪ್ರಯಾಣವನ್ನಷ್ಟೇ ಅಲ್ಲದೆ, ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಿಗೂ ದೊಡ್ಡ ಚೈತನ್ಯ ನೀಡಲಿದೆ. ಕರಾವಳಿ ಜನರ ಈ ನ್ಯಾಯಯುತ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸ ಇರಿಸಿದ್ದೇನೆ ಎಂದಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…