KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಮಂಗಳೂರು : ಸಕಲೇಶಪುರ ಘಾಟ್ ಸೆಕ್ಷನ್ ನಲ್ಲಿ ವಿದ್ಯುಧೀಕರಣ ಪೂರ್ಣಗೊಂಡ ಬೆನ್ನಲ್ಲೇ ಇದೀಗ ಮಂಗಳೂರು ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಆಗ್ರಹ ಕೇಳಿಬಂದಿದೆ.
ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಬೆಂಗಳೂರು ನಡುವೆ ಪ್ರತಿದಿನ 3 ವಂದೇ ಭಾರತ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವೀನ್ ವೈಷ್ಣವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರು ಮತ್ತು ಬೆಂಗಳೂರು ಕರ್ನಾಟಕದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳು. ಮಂಗಳೂರನ್ನು ಬೆಂಗಳೂರಿಗೆ ಪರ್ಯಾಯವಾದ ಅತ್ಯಾಧುನಿಕ ಉದ್ಯೋಗ ಮತ್ತು ಕೈಗಾರಿಕಾ ತಾಣವನ್ನಾಗಿ ರೂಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಆದರೆ, ಈ ಎರಡು ನಗರಗಳ ನಡುವಿನ ವೇಗದ ಸಾರಿಗೆ ಸಂಪರ್ಕದ ಕೊರತೆಯು ಈ ಬೆಳವಣಿಗೆಗೆ ದೊಡ್ಡ ಅಡ್ಡಿಯಾಗಿದೆ.
ಪ್ರಸ್ತುತ ಸಾವಿರಾರು ಉದ್ಯಮಿಗಳು ಮತ್ತು ವೃತ್ತಿಪರರು ಕೇವಲ ಕೆಲವೇ ಗಂಟೆಗಳ ಕೆಲಸಕ್ಕಾಗಿ ರಾತ್ರಿ ಪೂರ್ತಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇದೆ. ಇದು ನಮ್ಮ ಶ್ರಮಜೀವಿ ಜನರಿಗೆ ಆಗುತ್ತಿರುವ ಅನ್ಯಾಯ.
ಈ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಜನಸಾಮಾನ್ಯರ ಅನುಕೂಲಕ್ಕಾಗಿ ಈ ಕೆಳಗಿನಂತೆ ವಂದೇ ಭಾರತ್ ರೈಲುಗಳನ್ನು ಆರಂಭಿಸಲು ಕೋರಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಅದರಂತೆ, ಮಂಗಳೂರಿನಿಂದ ಬೆಂಗಳೂರಿಗೆ ಪ್ರತಿದಿನ 03 ವಂದೇ ಭಾರತ್ ರೈಲುಗಳ ಸೇವೆ ಒದಗಿಸುವಂತೆ ಉಲ್ಲೇಖಿಸಿದ್ದೇನೆ.
ಈ ರೈಲು ಸಂಪರ್ಕವು ಕೇವಲ ಪ್ರಯಾಣವನ್ನಷ್ಟೇ ಅಲ್ಲದೆ, ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಿಗೂ ದೊಡ್ಡ ಚೈತನ್ಯ ನೀಡಲಿದೆ. ಕರಾವಳಿ ಜನರ ಈ ನ್ಯಾಯಯುತ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸ ಇರಿಸಿದ್ದೇನೆ ಎಂದಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…