ಮಂಗಳೂರು,: ಕರಾವಳಿಯಿಂದ ರಾಜ್ಯ ರಾಜಧಾನಿಯನ್ನು ಸಂಪರ್ಕಿಸುವ ಬೆಂಗಳೂರು– ಮಂಗಳೂರು ನಡುವೆ ವಾರಕ್ಕೆ ಮೂರು ದಿನ ರಾತ್ರಿ ಸಂಚರಿಸಲಿರುವ ಹೊಸ ಎಕ್ಸ್ಪ್ರೆಸ್ ರೈಲು ಸೇವೆಗೆ ಇದೇ 21ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ದೊರೆಯಲಿದೆ.
ವಾರಕ್ಕೆ ಮೂರು ಬಾರಿ ಸಂಚರಿಸಲಿರುವ ಮಂಗಳೂರು ಸೆಂಟ್ರಲ್– ಯಶವಂತಪುರ ಎಕ್ಸ್ಪ್ರೆಸ್ ರೈಲಿಗೆ ಫೆ. 21 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಹಸಿರು ನಿಶಾನೆ ತೋರಲಿದ್ದಾರೆ.
ಹೊಸ ರೈಲು ಶುಕ್ರವಾರ, ಭಾನುವಾರ ಹಾಗೂ ಮಂಗಳವಾರ ಸಂಜೆ 4.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಶನಿವಾರ, ಸೋಮವಾರ ಹಾಗೂ ಬುಧವಾರ ಬೆಳಗಿನ ಜಾವ 4ಕ್ಕೆ ಮಂಗಳೂರು ತಲುಪಲಿದೆ.
ಮಂಗಳೂರಿನಿಂದ ಹೊರಡುವ ರೈಲು ಶನಿವಾರ, ಸೋಮವಾರ, ಬುಧವಾರಗಳಂದು ರಾತ್ರಿ 7 ಗಂಟೆಗೆ ಹೊರಟು ಮುಂಜಾನೆ 4.30ಕ್ಕೆ ಯಶವಂತಪುರ ತಲುಪಲಿದೆ. ನೂತನ ರೈಲಿನಿಂದಾಗಿ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು ಸುತ್ತಮುತ್ತಲಿನ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ.
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…