ಮಂಗಳೂರು,: ಕರಾವಳಿಯಿಂದ ರಾಜ್ಯ ರಾಜಧಾನಿಯನ್ನು ಸಂಪರ್ಕಿಸುವ ಬೆಂಗಳೂರು– ಮಂಗಳೂರು ನಡುವೆ ವಾರಕ್ಕೆ ಮೂರು ದಿನ ರಾತ್ರಿ ಸಂಚರಿಸಲಿರುವ ಹೊಸ ಎಕ್ಸ್ಪ್ರೆಸ್ ರೈಲು ಸೇವೆಗೆ ಇದೇ 21ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ದೊರೆಯಲಿದೆ.
ವಾರಕ್ಕೆ ಮೂರು ಬಾರಿ ಸಂಚರಿಸಲಿರುವ ಮಂಗಳೂರು ಸೆಂಟ್ರಲ್– ಯಶವಂತಪುರ ಎಕ್ಸ್ಪ್ರೆಸ್ ರೈಲಿಗೆ ಫೆ. 21 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಹಸಿರು ನಿಶಾನೆ ತೋರಲಿದ್ದಾರೆ.
ಹೊಸ ರೈಲು ಶುಕ್ರವಾರ, ಭಾನುವಾರ ಹಾಗೂ ಮಂಗಳವಾರ ಸಂಜೆ 4.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಶನಿವಾರ, ಸೋಮವಾರ ಹಾಗೂ ಬುಧವಾರ ಬೆಳಗಿನ ಜಾವ 4ಕ್ಕೆ ಮಂಗಳೂರು ತಲುಪಲಿದೆ.
ಮಂಗಳೂರಿನಿಂದ ಹೊರಡುವ ರೈಲು ಶನಿವಾರ, ಸೋಮವಾರ, ಬುಧವಾರಗಳಂದು ರಾತ್ರಿ 7 ಗಂಟೆಗೆ ಹೊರಟು ಮುಂಜಾನೆ 4.30ಕ್ಕೆ ಯಶವಂತಪುರ ತಲುಪಲಿದೆ. ನೂತನ ರೈಲಿನಿಂದಾಗಿ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು ಸುತ್ತಮುತ್ತಲಿನ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…