ಮಂಗಳೂರು: ಕಣ್ಣೂರು ಕೆಎಸ್ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್ಆರ್. ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಅಂಶಿಕವಾಗಿ ಹಿಂಪಡೆದಿದೆ.
ನವೆಂಬರ್ 1ರಿಂದ ಮಾರ್ಚ್ 31ರ ವರೆಗೆ ಯಶವಂತಪುರದಲ್ಲಿ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಕಾರಣ ಮುಂದಿಟ್ಟು 16511 ಹಾಗೂ 16512 ನಂಬರಿನ ರೈಲುಗಳನ್ನು ಯಶವಂತಪುರ, ಕೆಎಸ್ಆರ್ ಹೋಗದೆಯೇ ಎಸ್ಎಂವಿಟಿಬಿಯಿಂದ ಸಂಚರಿಸುವಂತೆ ರೈಲ್ವೇ ಇಲಾಖೆ ಪ್ರಕಟನೆ ಹೊರಡಿಸಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಮತ್ತೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ.
ಈಗಿನ ಮಾಹಿತಿಯಂತೆ 16511 ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ರೈಲು ಕೆಎಸ್ಆರ್ನಿಂದ ರಾತ್ರಿ 9.35ಕ್ಕೆ ಹೊರಡುವ ಬದಲು ಎಸ್ಎಂವಿಟಿಬಿಯಿಂದ ರಾತ್ರಿ 8ಕ್ಕೆ ಹೊರಟು ಕೆಎಸ್ಆರ್ಗೆ ಹೋಗದೆ ಯಶವಂತಪುರಕ್ಕೆ 9.25ಕ್ಕೆ ಆಗಮಿಸುವುದು, ಅಲ್ಲಿಂದ 9.45ಕ್ಕೆ ಹೊರಡಲಿದೆ. ನಂ. 16512 ರೈಲು ಕಣ್ಣೂರಿನಿಂದ 5.05ಕ್ಕೆ ಸಂಜೆ ಹೊರಟು ಯಶವಂತಪುರಕ್ಕೆ ಮರುದಿನ ಬೆಳಗ್ಗೆ 6.10ಕ್ಕೆ ತಲಪುವುದು, ಅಲ್ಲಿಂದ 6.30ಕ್ಕೆ ಹೊರಟು ಎಸ್ಎಂವಿಟಿಬಿಗೆ 7.45ಕ್ಕೆ ತಲುಪಲಿದೆ. ಆದರೆ ಕೆಎಸ್ಆರ್ ಸ್ಟೇಷನ್ಗೆ ಹೋಗುವುದಿಲ್ಲಎಂದು ಪ್ರಕಟನೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…