Featured

ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು – vishwanews24

ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು

ಮಂಗಳೂರು: ಕಣ್ಣೂರು ಕೆಎಸ್ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್ಆರ್. ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಅಂಶಿಕವಾಗಿ ಹಿಂಪಡೆದಿದೆ.

ನವೆಂಬರ್ 1ರಿಂದ ಮಾರ್ಚ್ 31ರ ವರೆಗೆ ಯಶವಂತಪುರದಲ್ಲಿ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಕಾರಣ ಮುಂದಿಟ್ಟು 16511 ಹಾಗೂ 16512 ನಂಬರಿನ ರೈಲುಗಳನ್ನು ಯಶವಂತಪುರ, ಕೆಎಸ್ಆರ್ ಹೋಗದೆಯೇ ಎಸ್ಎಂವಿಟಿಬಿಯಿಂದ ಸಂಚರಿಸುವಂತೆ ರೈಲ್ವೇ ಇಲಾಖೆ ಪ್ರಕಟನೆ ಹೊರಡಿಸಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಮತ್ತೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ.

ಈಗಿನ ಮಾಹಿತಿಯಂತೆ 16511 ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ರೈಲು ಕೆಎಸ್ಆರ್ನಿಂದ ರಾತ್ರಿ 9.35ಕ್ಕೆ ಹೊರಡುವ ಬದಲು ಎಸ್ಎಂವಿಟಿಬಿಯಿಂದ ರಾತ್ರಿ 8ಕ್ಕೆ ಹೊರಟು ಕೆಎಸ್ಆರ್ಗೆ ಹೋಗದೆ ಯಶವಂತಪುರಕ್ಕೆ 9.25ಕ್ಕೆ ಆಗಮಿಸುವುದು, ಅಲ್ಲಿಂದ 9.45ಕ್ಕೆ ಹೊರಡಲಿದೆ. ನಂ. 16512 ರೈಲು ಕಣ್ಣೂರಿನಿಂದ 5.05ಕ್ಕೆ ಸಂಜೆ ಹೊರಟು ಯಶವಂತಪುರಕ್ಕೆ ಮರುದಿನ ಬೆಳಗ್ಗೆ 6.10ಕ್ಕೆ ತಲಪುವುದು, ಅಲ್ಲಿಂದ 6.30ಕ್ಕೆ ಹೊರಟು ಎಸ್ಎಂವಿಟಿಬಿಗೆ 7.45ಕ್ಕೆ ತಲುಪಲಿದೆ. ಆದರೆ ಕೆಎಸ್ಆರ್ ಸ್ಟೇಷನ್ಗೆ ಹೋಗುವುದಿಲ್ಲಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago