ಮಂಗಳೂರು : ದೇಶದ ಇತಿಹಾಸದಲ್ಲಿ ಕೇಂದ್ರ ಸರಕಾರ ಹೊಸ ಸಾಧನೆ ಮಾಡಿದ್ದು, ತೈಲ ಬೆಲೆ ಏರಿಕೆ ಮಾಡಿ ಖಜಾನೆ ತುಂಬುತ್ತಿದ್ದಾರೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಪೆಟ್ರೋಲ್ ಪಂಪ್ ತೆರಿಗೆ ಸಂಗ್ರಹಿಸುವ ಕೇಂದ್ರವಾಗಿದೆ. ಪ್ರಸ್ತುತ ಜನರ ದುಡಿಮೆ ಪೆಟ್ರೋಲ್, ಡೀಸೆಲ್ ಗಾಗಿ ಖರ್ಚಾಗುತ್ತಿದೆ. ಬೆಲೆ ಏರಿಕೆ ಮಾಡುವ ಮೂಲಕ ದೇಶದ ಜನರ ಮೇಲೆ ಹೊರೆ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಕಡಿಮೆ ಇತ್ತು. ಪ್ರಸ್ತುತ 31.86 ಪೈಸೆ ತೆರಿಗೆ ಇದೆ. ಟ್ಯಾಕ್ಸ್ ಹಾಕುವ ಮೂಲಕ ಲೂಟಿ ಮಾಡಲಾಗುತ್ತಿದೆ. ಜನರು ಕಷ್ಟದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ತೆರಿಗೆ ಸಂಗ್ರಹಿಸುತ್ತಿದ್ದಾರೆಯೇ ಹೊರತು ಅಭಿವೃದ್ಧಿಯಾಗುತ್ತಿಲ್ಲ. ಸುಳ್ಳು ಹೇಳಿ ಜನರಿಗೆ ಮೋಸ ಮಾಡಲಾಗುತ್ತಿದೆ. ಸಮಸ್ಯೆಯಾದಾಗ ಜನರಿಗೆ ಹೊರೆಯಾಗದಂತೆ ಸರಕಾರ ನೋಡಿಕೊಳ್ಳಬೇಕೆಂದು ಖಾದರ್ ತಿಳಿಸಿದ್ದಾರೆ.
ಜನರು ದಂಗೆ ಏಳುವ ಮುಂಚೆ ಸರಕಾರ ಎಚ್ಚೆತ್ತುಕೊಳ್ಳಬೇಕು. ಬೆಲೆ ಏರಿಕೆಯನ್ನು ಸಮರ್ಥನೆ ಮಾಡುವವರು ಯೋಚನೆ ಮಾಡಬೇಕು. ಮೀನುಗಾರರು ಸ್ವಾಭಿಮಾನ, ನಿಯತ್ತಿನಿಂದ ದುಡಿಯುತ್ತಿದ್ದಾರೆ. ಮೀನುಗಾರರಿಗೆ ಸರಿಯಾದ ಸಮಯದಲ್ಲಿ ಸಬ್ಸಿಡಿ ನೀಡಿಲ್ಲ. ಮೀನುಗಾರರಿಗೆ ಅನ್ಯಾಯ ಮಾಡಿದವರು ಕ್ಷಮೆ ಕೇಳಬೇಕು ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಆಗ್ರಹಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…