ಮಂಗಳೂರು : ದೇಶದ ಇತಿಹಾಸದಲ್ಲಿ ಕೇಂದ್ರ ಸರಕಾರ ಹೊಸ ಸಾಧನೆ ಮಾಡಿದ್ದು, ತೈಲ ಬೆಲೆ ಏರಿಕೆ ಮಾಡಿ ಖಜಾನೆ ತುಂಬುತ್ತಿದ್ದಾರೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಪೆಟ್ರೋಲ್ ಪಂಪ್ ತೆರಿಗೆ ಸಂಗ್ರಹಿಸುವ ಕೇಂದ್ರವಾಗಿದೆ. ಪ್ರಸ್ತುತ ಜನರ ದುಡಿಮೆ ಪೆಟ್ರೋಲ್, ಡೀಸೆಲ್ ಗಾಗಿ ಖರ್ಚಾಗುತ್ತಿದೆ. ಬೆಲೆ ಏರಿಕೆ ಮಾಡುವ ಮೂಲಕ ದೇಶದ ಜನರ ಮೇಲೆ ಹೊರೆ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಕಡಿಮೆ ಇತ್ತು. ಪ್ರಸ್ತುತ 31.86 ಪೈಸೆ ತೆರಿಗೆ ಇದೆ. ಟ್ಯಾಕ್ಸ್ ಹಾಕುವ ಮೂಲಕ ಲೂಟಿ ಮಾಡಲಾಗುತ್ತಿದೆ. ಜನರು ಕಷ್ಟದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ತೆರಿಗೆ ಸಂಗ್ರಹಿಸುತ್ತಿದ್ದಾರೆಯೇ ಹೊರತು ಅಭಿವೃದ್ಧಿಯಾಗುತ್ತಿಲ್ಲ. ಸುಳ್ಳು ಹೇಳಿ ಜನರಿಗೆ ಮೋಸ ಮಾಡಲಾಗುತ್ತಿದೆ. ಸಮಸ್ಯೆಯಾದಾಗ ಜನರಿಗೆ ಹೊರೆಯಾಗದಂತೆ ಸರಕಾರ ನೋಡಿಕೊಳ್ಳಬೇಕೆಂದು ಖಾದರ್ ತಿಳಿಸಿದ್ದಾರೆ.
ಜನರು ದಂಗೆ ಏಳುವ ಮುಂಚೆ ಸರಕಾರ ಎಚ್ಚೆತ್ತುಕೊಳ್ಳಬೇಕು. ಬೆಲೆ ಏರಿಕೆಯನ್ನು ಸಮರ್ಥನೆ ಮಾಡುವವರು ಯೋಚನೆ ಮಾಡಬೇಕು. ಮೀನುಗಾರರು ಸ್ವಾಭಿಮಾನ, ನಿಯತ್ತಿನಿಂದ ದುಡಿಯುತ್ತಿದ್ದಾರೆ. ಮೀನುಗಾರರಿಗೆ ಸರಿಯಾದ ಸಮಯದಲ್ಲಿ ಸಬ್ಸಿಡಿ ನೀಡಿಲ್ಲ. ಮೀನುಗಾರರಿಗೆ ಅನ್ಯಾಯ ಮಾಡಿದವರು ಕ್ಷಮೆ ಕೇಳಬೇಕು ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಆಗ್ರಹಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…