ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31) ಅವರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಇಂದು ಮೂರು ತಾಲೂಕು ಬಂದ್ಗೆ ಕರೆ ನೀಡಲಾಗಿದೆ.
ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್ಗೆ ವಿಎಚ್ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.
ಅಂಗಡಿ ಮುಂಗಟ್ಟು ತೆರೆಯದಂತೆ ಸಂಘಟನೆಗಳು ವಿನಂತಿ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು, ಸುಳ್ಯ ತಾಲೂಕಿನ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಏನಿದು ಪ್ರಕರಣ?
ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ, ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.
ಬಿಜೆಪಿ ಕಾರ್ಯಕರ್ತನನ್ನು ತಲವಾರಿನಿಂದ ಕಡಿದು ಕೊಲೆ-ದಕ್ಷಿಣ ಕನ್ನಡದಲ್ಲಿ ಮತ್ತೆ ಹರಿದ ನೆತ್ತರು: vishwanews24
ಪ್ರವೀಣ್ ಪತ್ನಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಹತ್ಯೆ ಕಳೆದ 4 ದಿನಗಳ ಹಿಂದೆ ನಡೆದಿದ್ದ ಅನ್ಯಕೋಮಿನ ಯುವಕನೋರ್ವನ ಕೊಲೆಗೆ ಪ್ರತೀಕಾರ ಎನ್ನಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹಲವು ಪೋಸ್ಟ್ಗಳು ಹರಿದಾಡಿದ್ದವು. ಹೀಗಾಗಿ, ಇದು ಸೇಡಿನ ಹತ್ಯೆ ಇರಬಹುದು ಎಂದು ಶಂಕಿಸಲಾಗಿದೆ.
ಪ್ರವೀಣ್ ಹತ್ಯೆ ಖಂಡಿಸಿ, ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪುತ್ತೂರಿನ ಖಾಸಗಿ ಆಸ್ಪತ್ರೆ ಮುಂಭಾಗ ಧರಣಿ ಕೂತು ಡಿಸಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…