ಮಂಗಳೂರು: ಬೇರೆಯವರ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.
ಬಂಟ್ವಾಳ ಸರಪಾಡಿ ಗ್ರಾಮದ ನಿವಾಸಿ ಬದ್ರುದ್ದೀನ್ ಶಿಕ್ಷೆಗೊಳಗಾದ ಅಪರಾಧಿ. 2010ರ ಫೆ.2ರಂದು ಹಸೈನಾರ್ಗೆ ಸೇರಿದ ಪಾಸ್ಪೋರ್ಟ್ನಲ್ಲಿ ದುಬೈಗೆ ಹೋಗಲು ಯತ್ನಿಸಿದ್ದ. ಈ ಪಾಸ್ಪೋರ್ಟ್ ಅನ್ನು ಅಬ್ಬಾಸ್ ಅವರು ಬದ್ರುದ್ದೀನ್ಗೆ ನೀಡಿದ್ದರು.
ಇಮಿಗ್ರೇಷನ್ ಅಧಿಕಾರಿ ಕೆ.ಎಂ. ಚಂದ್ರಶೇಖರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಬಜಪೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಿಲ್ಪಾ ಅವರು ಸೆ. 28ರಂದು 1ನೇ ಆರೋಪಿ ಬದ್ರುದ್ದೀನ್ಗೆ 1 ವರ್ಷ ಜೈಲು ಮತ್ತು 15 ಸಾವಿರ ರೂ. ದಂಡವನ್ನು ವಿಧಿಸಿದ್ದು, 2ನೇ ಆರೋಪಿ ಬಂಟ್ವಾಳ ಮಂಚಿ ಗ್ರಾಮದ ಅಬ್ಟಾಸ್ ಅವರನ್ನು ಖುಲಾಸೆಗೊಳಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…