ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಬಳಿ ನಡೆದಿದೆ.
ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರ ಸಾವ್ಯೊ ಮಹೇಶ್ ( 21 ವರ್ಷ) ಮೃತ ಬೈಕ್ ಸವಾರರಾಗಿದ್ದಾರೆ. ‘ಯುವಕರಿಬ್ಬರು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಗೇಟ್ ಎದುರಿನ ತೆರೆದ ರಸ್ತೆ ವಿಭಜಕದ ಬಳಿ ಬೈಕಿನಲ್ಲಿ ‘ಯು ಟರ್ನ್ ತೆಗೆದು ಮುಂದೆ ಸಾಗುತ್ತಿದ್ದರು. ಅಷ್ಟರಲ್ಲಿ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಅವರ ಬೈಕಿಗೆ ಡಿಕ್ಕಿ ಹೊಡೆದಿತ್ತು. ಮಹೇಶ್ ಅವರ ಮೂಗು, ಎಡ ಕೈ, ಎಡ ಕಾಲಿನ ಗಂಟು ಹಾಗೂ ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ರಕ್ತ ಗಾಯಗಳಾಗಿ ಪ್ರಜ್ಞಾಹೀನರಾಗಿ ಬಿದ್ದಿದ್ದರು.
ಸ್ಥಳದಲ್ಲಿದ್ದವರು ಅವರನ್ನು ವಾಹನವೊಂದರಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಸಹಸವಾರ ಪ್ರಣಮ್ ಶೆಟ್ಟಿ ಅವರ ತಲೆಗೆ, ಬಲಕೈಗೆ, ಎಡ ತೋಳಿಗೆ, ಎಡಮೊಣ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಅವರನ್ನು ನಾಸಿರ್ ಎಂಬುವರು ತಮ್ಮ ಆಟೊರಿಕ್ಷಾದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಸಿರ್ ನೀಡಿದ ದೂರಿನನ್ವಯ ಕಾರು ಚಾಲಕ ಶ್ಯಾಮ್ ಸುಧೀರ್ ವಿರುದ್ಧ ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…