Featured

ಮಂಗಳೂರು : ಬೈಕಿಗೆ ಕಾರು ಡಿಕ್ಕಿ ; ಸವಾರ ಮೃತ್ಯು.. Vishwanews24

ಮಂಗಳೂರು : ಬೈಕಿಗೆ ಕಾರು ಡಿಕ್ಕಿ ಸವಾರ ಮೃತ್ಯು..

ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ನಡೆದಿದೆ.

ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‌ ಸವಾರ ಸಾವ್ಯೊ  ಮಹೇಶ್ ( 21 ವರ್ಷ) ಮೃತ ಬೈಕ್ ಸವಾರರಾಗಿದ್ದಾರೆ.  ‘ಯುವಕರಿಬ್ಬರು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಗೇಟ್ ಎದುರಿನ ತೆರೆದ ರಸ್ತೆ ವಿಭಜಕದ ಬಳಿ ಬೈಕಿನಲ್ಲಿ ‘ಯು ಟರ್ನ್ ತೆಗೆದು ಮುಂದೆ ಸಾಗುತ್ತಿದ್ದರು. ಅಷ್ಟರಲ್ಲಿ ಬಿ.ಸಿ.ರೋಡ್‌ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಅವರ ಬೈಕಿಗೆ ಡಿಕ್ಕಿ ಹೊಡೆದಿತ್ತು. ಮಹೇಶ್ ಅವರ ಮೂಗು, ಎಡ ಕೈ, ಎಡ ಕಾಲಿನ ಗಂಟು ಹಾಗೂ ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ರಕ್ತ ಗಾಯಗಳಾಗಿ ಪ್ರಜ್ಞಾಹೀನರಾಗಿ ಬಿದ್ದಿದ್ದರು.

ಸ್ಥಳದಲ್ಲಿದ್ದವರು ಅವರನ್ನು ವಾಹನವೊಂದರಲ್ಲಿ ವೆನ್ಲಾಕ್‌ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ‌ ಸಹಸವಾರ ಪ್ರಣಮ್ ಶೆಟ್ಟಿ ಅವರ ತಲೆಗೆ, ಬಲಕೈಗೆ, ಎಡ ತೋಳಿಗೆ, ಎಡಮೊಣ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಅವರನ್ನು ನಾಸಿರ್ ಎಂಬುವರು ತಮ್ಮ ಆಟೊರಿಕ್ಷಾದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಸಿರ್ ನೀಡಿದ ದೂರಿನನ್ವಯ ಕಾರು ಚಾಲಕ ಶ್ಯಾಮ್ ಸುಧೀರ್ ವಿರುದ್ಧ ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

1 day ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

1 day ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

2 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

2 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

2 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

2 days ago