ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಬಳಿ ನಡೆದಿದೆ.
ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರ ಸಾವ್ಯೊ ಮಹೇಶ್ ( 21 ವರ್ಷ) ಮೃತ ಬೈಕ್ ಸವಾರರಾಗಿದ್ದಾರೆ. ‘ಯುವಕರಿಬ್ಬರು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಗೇಟ್ ಎದುರಿನ ತೆರೆದ ರಸ್ತೆ ವಿಭಜಕದ ಬಳಿ ಬೈಕಿನಲ್ಲಿ ‘ಯು ಟರ್ನ್ ತೆಗೆದು ಮುಂದೆ ಸಾಗುತ್ತಿದ್ದರು. ಅಷ್ಟರಲ್ಲಿ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಅವರ ಬೈಕಿಗೆ ಡಿಕ್ಕಿ ಹೊಡೆದಿತ್ತು. ಮಹೇಶ್ ಅವರ ಮೂಗು, ಎಡ ಕೈ, ಎಡ ಕಾಲಿನ ಗಂಟು ಹಾಗೂ ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ರಕ್ತ ಗಾಯಗಳಾಗಿ ಪ್ರಜ್ಞಾಹೀನರಾಗಿ ಬಿದ್ದಿದ್ದರು.
ಸ್ಥಳದಲ್ಲಿದ್ದವರು ಅವರನ್ನು ವಾಹನವೊಂದರಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಸಹಸವಾರ ಪ್ರಣಮ್ ಶೆಟ್ಟಿ ಅವರ ತಲೆಗೆ, ಬಲಕೈಗೆ, ಎಡ ತೋಳಿಗೆ, ಎಡಮೊಣ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಅವರನ್ನು ನಾಸಿರ್ ಎಂಬುವರು ತಮ್ಮ ಆಟೊರಿಕ್ಷಾದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಸಿರ್ ನೀಡಿದ ದೂರಿನನ್ವಯ ಕಾರು ಚಾಲಕ ಶ್ಯಾಮ್ ಸುಧೀರ್ ವಿರುದ್ಧ ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…