Featured

ಮಂಗಳೂರು: ಬ್ಯಾಂಕಾಕ್‌ನಲ್ಲಿ ನಡೆದ ವಿಶ್ವ ಜಾದೂ ಸಮ್ಮೇಳನ : ಜಾದೂಗಾರ ಕುದ್ರೋಳಿ ಗಣೇಶ್ ಅವರ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ – Vishwanews24

ಮಂಗಳೂರು: ಬ್ಯಾಂಕಾಕ್‌ನಲ್ಲಿ ನಡೆದ ವಿಶ್ವ ಜಾದೂ ಸಮ್ಮೇಳನ : ಜಾದೂಗಾರ ಕುದ್ರೋಳಿ ಗಣೇಶ್ ಅವರ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ಥೈಲ್ಯಾಂಡಿನ ಬ್ಯಾಂಕಾಕ್‌ನಲ್ಲಿ  ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಪ್ರಸುತ ಪಡಿಸಿದ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿದೆ.

ಜಗತ್ತಿನ ಅತ್ಯಂತ ಪುರಾತನ ಜಾದೂ ಆಗಿರುವ ಕಪ್ಸ್ ಆಂಡ್ ಬಾಲ್ಸ್ ಮ್ಯಾಜಿಕ್ ಅನ್ನು ಕುದ್ರೋಳಿ ಗಣೇಶ್ ಅವರು ನೂತನ ತಂತ್ರಗಾರಿಕೆಯ ಮೂಲಕ ತುಳು ಭಾಷೆ ಹಾಗೂ ಪಾಡ್ದನದ ಮೂಲಕ ಪ್ರಸ್ತುತ ಪಡಿಸಿದ ಸೃಜನಶೀಲತೆಯನ್ನು ಪರಿಗಣಿಸಿ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿರುವ ಜಗತ್ತಿನ ಬೃಹತ್ ಜಾದೂ ಸಂಸ್ಥೆ ಅನ್ನುವ ಹೆಗ್ಗಳಿಕೆ ಹೊಂದಿದ ಅಮೆರಿಕಾದ ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯು ಪ್ರತಿಷ್ಟಿತ ಮರ್ಲಿನ್ ಮೆಡಲ್ ನೀಡಿ ಗೌರವಿಸಿದೆ. ತುಳುನಾಡು ತುಡರ್ ಚೆಂಡು ಜಾದೂವಿನ ಹೊಸತನವನ್ನು ಗಮನಿಸಿ ವಿಶ್ವ ಜಾದೂ ಸಮ್ಮೇಳನ ಸಂಘಟಿಸಿದ ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಮೋಸ್ಟ್ ಓರಿಜಿನಲ್ ಆಕ್ಟ್ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಅಮೆರಿಕಾದ ಜಾದೂಗಾರ ಟೋನಿ ಹಸೀನಿ ಹಾಗೂ ಉಕ್ರೇನಿನ ಜಾದೂಗಾರ ವೊರೋನಿನ್ ಅವರು ಕುದ್ರೋಳಿ ಗಣೇಶ್ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಅಧ್ಯಕ್ಷರಾದ ಜಾದೂಗಾರ ಮಮದಾ ಹಾಗೂ ಭಾರತದ ದಿಲ್ಲಿ ಸ್ಕೂಲ್ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಜಾದೂಗಾರ ರಾಜ್ ಕುಮಾರ್ ಉಪಸ್ಥಿತರಿದ್ದರು.

ಹಾಂಗ್ ಕಾಂಗ್ ಜಾದೂಗಾರರಾದ ಅಲ್ಬರ್ಟ್ ಟಾಮ್ ಮತ್ತು ಬಾಂಡ್ ಲೀ, ಇಂಡೋನೇಶಿಯಾದ ಜಾದೂಗಾರ ಹ್ಯಾಂಡಿ, ಸಿಂಗಾಪುರದ ಜಾದೂಗಾರ ಕಸ್ಸಿಡಿ ಲೀ ಮುಂತಾದವರು ಆಯ್ಕೆ ಸಮಿತಿಯಲ್ಲಿದ್ದರು. ಬ್ಯಾಂಕಾಕ್‌ನ ಫ್ಯಾಶನ್ ಐಲ್ಯಾಂಡ್ ಮಾಲ್ ಪ್ರಾಂಗಣದಲ್ಲಿ ನಡೆದ ಐದು ದಿನಗಳ ವಿಶ್ವ ಜಾದೂ ಸಮ್ಮೇಳನದಲ್ಲಿ ಜಗತ್ತಿನ ಹತ್ತಕ್ಕೂ ಹೆಚ್ಚು ದೇಶಗಳ ನೂರಾರು ಜಾದೂಗಾರರು ಭಾಗವಹಿಸಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago