Featured

ಮಂಗಳೂರು: ಬ್ಯಾಂಕಾಕ್‌ನಲ್ಲಿ ನಡೆದ ವಿಶ್ವ ಜಾದೂ ಸಮ್ಮೇಳನ : ಜಾದೂಗಾರ ಕುದ್ರೋಳಿ ಗಣೇಶ್ ಅವರ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ – Vishwanews24

ಮಂಗಳೂರು: ಬ್ಯಾಂಕಾಕ್‌ನಲ್ಲಿ ನಡೆದ ವಿಶ್ವ ಜಾದೂ ಸಮ್ಮೇಳನ : ಜಾದೂಗಾರ ಕುದ್ರೋಳಿ ಗಣೇಶ್ ಅವರ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ಥೈಲ್ಯಾಂಡಿನ ಬ್ಯಾಂಕಾಕ್‌ನಲ್ಲಿ  ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಪ್ರಸುತ ಪಡಿಸಿದ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿದೆ.

ಜಗತ್ತಿನ ಅತ್ಯಂತ ಪುರಾತನ ಜಾದೂ ಆಗಿರುವ ಕಪ್ಸ್ ಆಂಡ್ ಬಾಲ್ಸ್ ಮ್ಯಾಜಿಕ್ ಅನ್ನು ಕುದ್ರೋಳಿ ಗಣೇಶ್ ಅವರು ನೂತನ ತಂತ್ರಗಾರಿಕೆಯ ಮೂಲಕ ತುಳು ಭಾಷೆ ಹಾಗೂ ಪಾಡ್ದನದ ಮೂಲಕ ಪ್ರಸ್ತುತ ಪಡಿಸಿದ ಸೃಜನಶೀಲತೆಯನ್ನು ಪರಿಗಣಿಸಿ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿರುವ ಜಗತ್ತಿನ ಬೃಹತ್ ಜಾದೂ ಸಂಸ್ಥೆ ಅನ್ನುವ ಹೆಗ್ಗಳಿಕೆ ಹೊಂದಿದ ಅಮೆರಿಕಾದ ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯು ಪ್ರತಿಷ್ಟಿತ ಮರ್ಲಿನ್ ಮೆಡಲ್ ನೀಡಿ ಗೌರವಿಸಿದೆ. ತುಳುನಾಡು ತುಡರ್ ಚೆಂಡು ಜಾದೂವಿನ ಹೊಸತನವನ್ನು ಗಮನಿಸಿ ವಿಶ್ವ ಜಾದೂ ಸಮ್ಮೇಳನ ಸಂಘಟಿಸಿದ ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಮೋಸ್ಟ್ ಓರಿಜಿನಲ್ ಆಕ್ಟ್ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಅಮೆರಿಕಾದ ಜಾದೂಗಾರ ಟೋನಿ ಹಸೀನಿ ಹಾಗೂ ಉಕ್ರೇನಿನ ಜಾದೂಗಾರ ವೊರೋನಿನ್ ಅವರು ಕುದ್ರೋಳಿ ಗಣೇಶ್ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಅಧ್ಯಕ್ಷರಾದ ಜಾದೂಗಾರ ಮಮದಾ ಹಾಗೂ ಭಾರತದ ದಿಲ್ಲಿ ಸ್ಕೂಲ್ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಜಾದೂಗಾರ ರಾಜ್ ಕುಮಾರ್ ಉಪಸ್ಥಿತರಿದ್ದರು.

ಹಾಂಗ್ ಕಾಂಗ್ ಜಾದೂಗಾರರಾದ ಅಲ್ಬರ್ಟ್ ಟಾಮ್ ಮತ್ತು ಬಾಂಡ್ ಲೀ, ಇಂಡೋನೇಶಿಯಾದ ಜಾದೂಗಾರ ಹ್ಯಾಂಡಿ, ಸಿಂಗಾಪುರದ ಜಾದೂಗಾರ ಕಸ್ಸಿಡಿ ಲೀ ಮುಂತಾದವರು ಆಯ್ಕೆ ಸಮಿತಿಯಲ್ಲಿದ್ದರು. ಬ್ಯಾಂಕಾಕ್‌ನ ಫ್ಯಾಶನ್ ಐಲ್ಯಾಂಡ್ ಮಾಲ್ ಪ್ರಾಂಗಣದಲ್ಲಿ ನಡೆದ ಐದು ದಿನಗಳ ವಿಶ್ವ ಜಾದೂ ಸಮ್ಮೇಳನದಲ್ಲಿ ಜಗತ್ತಿನ ಹತ್ತಕ್ಕೂ ಹೆಚ್ಚು ದೇಶಗಳ ನೂರಾರು ಜಾದೂಗಾರರು ಭಾಗವಹಿಸಿದ್ದರು.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 hours ago