ಮಂಗಳೂರು: ಬ್ಯಾಂಕ್‌ ದರೋಡೆ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಇಲಾಖೆಗೆ ಯು.ಟಿ ಖಾದರ್‌ ಅಭಿನಂದನೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಬ್ಯಾಂಕ್‌ ದರೋಡೆ ಪ್ರಕರಣ – ಪೊಲೀಸರ ಶ್ರಮಕ್ಕೆ ಕೃತಜ್ಞತೆಗಳು : ಯು.ಟಿ ಖಾದರ್‌

ಮಂಗಳೂರು : ಉಳ್ಳಾಲ ತಾಲೂಕಿನ ತಲಪಾಡಿಯ ಕೋಟೆಕಾರು ಸಹಕಾರಿ ಸಂಘದಲ್ಲಿ ಹಾಡಹಗಲೇ ದರೋಡೆಗೈದ ಆರೋಪಿಗಳ ಜಾಡು ಹಿಡಿದು ತಮಿಳುನಾಡಿನಲ್ಲಿ ಬಂಧಿಸಿರುವ ಪೊಲೀಸರ ದಿಟ್ಟ ಕ್ರಮ ಶ್ಲಾಘನಾರ್ಹವಾದುದು ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ದರೋಡೆಯಾದ ಕಡಿಮೆ ಸಮಯದಲ್ಲೇ ಆರೋಪಿಗಳನ್ನು ಬಂಧಿಸಿರುವುದರಿಂದ ಪೊಲೀಸರ ಮೇಲಿನ ವಿಶ್ವಾಸ ಮತ್ತು ನಂಬಿಕೆ ಇಮ್ಮಡಿಯಾಗಿದೆ.ಪೊಲೀಸರ ಶ್ರಮಕ್ಕೆ ಕೃತಜ್ಞತೆಗಳು. ಇದೇ ರೀತಿ ಬಂಟ್ವಾಳ ನಾರ್ಶದ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆ ದರೋಡೆ ಪ್ರಕರಣದಲ್ಲೂ ಆರೋಪಿಗಳು ಶೀಘ್ರ ಪೊಲೀಸ್ ಬಲೆಗೆ ಬೀಳಲಿದ್ದಾರೆ. ಇದರ ತನಿಖೆಯಲ್ಲಿ ಬಹಳಷ್ಟು ಪ್ರಗತಿ ಕಂಡು ಬಂದಿದೆ ಎಂದು ಯು.ಟಿ.ಖಾದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ – ಮೂವರು ಆರೋಪಿಗಳ ಬಂಧನ – vishwanews24

Leave a Reply