ಮಂಗಳೂರು: ನಗರದ ಲೇಡಿ ಹಿಲ್ನಲ್ಲಿ ನಿರ್ಮಿಸಿರುವ ಶ್ರೀ ನಾರಾಯಣಗುರು ವೃತ್ತ ಮತ್ತು ಮಂಗಳಾದೇವಿಯ ಮಂಗಳಾದೇವಿ ವೃತ್ತವನ್ನು ಸೋಮವಾರ ರಾತ್ರಿ ಉದ್ಘಾಟಿಸಲಾಯಿತು.
ದಸರಾ ಅಂಗವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಿರುವ ರಸ್ತೆಗಳ ಬೆಳಕಿನ ಹೊನಲಿನಲ್ಲಿ ವೃತ್ತಗಳನ್ನು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿದರು.
ನಾರಾಯಣ ಗುರು ವೃತ್ತ ಉದ್ಘಾಟಿಸಿ ಮಾತನಾಡಿದ ಸುನಿಲ್ ಕುಮಾರ್, ನಗರದ ಸೌಂದರ್ಯೀಕರಣಕ್ಕೆ ಈಗಿನ ಆಡಳಿತ ಒತ್ತು ನೀಡಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಮೇಲೆ ಆಡಳಿತಕ್ಕೆ ಶ್ರದ್ಧೆ ಮತ್ತು ಭಕ್ತಿ ಇದ್ದು ಅವಕಾಶ ಸಿಕ್ಕಿದಾಗಲೆಲ್ಲ ಅವರ ಆದರ್ಶವನ್ನು ಪಾಲಿಸಲಾಗಿದೆ. ವೃತ್ತದ ಹೆಸರಿನಲ್ಲಿ ಮಹಾಪುರುಷರ ಹೆಸರು ಶಾಶ್ವತ ಆಗಿರುತ್ತದೆ ಎಂಬುದನ್ನು ಮನಗಂಡು ಇಲ್ಲಿ ಈ ವೃತ್ತ ನಿರ್ಮಿಸಲಾಗಿದೆ. ಸರ್ಕಾರ ಮತ್ತು ಮಹಾನಗರಪಾಲಿಕೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತ ಮುಂದುವರಿದಿದೆ ಎಂದರು.
ಶಾಸಕ ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ ಕೆ., ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮುಡಾ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರ್, ಪಾಲಿಕೆ ಸದಸ್ಯೆ ಸಂಧ್ಯಾ ಆಚಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಭಾಸ್ಕರ್ ಎನ್, ಸದಸ್ಯ ಜಯಾನಂದ ಚೇಳ್ಯಾರ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಸಾಯಿರಾಮ್ ಮತ್ತಿತರರು ಇದ್ದರು.
ಸ್ವಾಗತ ಭಾಷಣ ಮಾಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಶಿವರಾತ್ರಿಗೆ ಮೊದಲು ಗೋಕರ್ಣನಾಥೇಶ್ವರ ಕ್ಷೇತ್ರದ ಎದುರಿನ ರಸ್ತೆಗೆ ವಿಶೇಷ ವಿದ್ಯುತ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು : ಸಿಬಿಐ – Vishwanews24
ವೃತ್ತ ನಿರ್ಮಾಣದಲ್ಲಿ ಭಾಗಿಯಾದ ಗುತ್ತಿಗೆದಾರರು, ಶಿಲ್ಪಿಗಳು ಮತ್ತಿತರರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…