ಮಂಗಳೂರು: ನಗರದ ಲೇಡಿ ಹಿಲ್ನಲ್ಲಿ ನಿರ್ಮಿಸಿರುವ ಶ್ರೀ ನಾರಾಯಣಗುರು ವೃತ್ತ ಮತ್ತು ಮಂಗಳಾದೇವಿಯ ಮಂಗಳಾದೇವಿ ವೃತ್ತವನ್ನು ಸೋಮವಾರ ರಾತ್ರಿ ಉದ್ಘಾಟಿಸಲಾಯಿತು.
ದಸರಾ ಅಂಗವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಿರುವ ರಸ್ತೆಗಳ ಬೆಳಕಿನ ಹೊನಲಿನಲ್ಲಿ ವೃತ್ತಗಳನ್ನು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿದರು.
ನಾರಾಯಣ ಗುರು ವೃತ್ತ ಉದ್ಘಾಟಿಸಿ ಮಾತನಾಡಿದ ಸುನಿಲ್ ಕುಮಾರ್, ನಗರದ ಸೌಂದರ್ಯೀಕರಣಕ್ಕೆ ಈಗಿನ ಆಡಳಿತ ಒತ್ತು ನೀಡಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಮೇಲೆ ಆಡಳಿತಕ್ಕೆ ಶ್ರದ್ಧೆ ಮತ್ತು ಭಕ್ತಿ ಇದ್ದು ಅವಕಾಶ ಸಿಕ್ಕಿದಾಗಲೆಲ್ಲ ಅವರ ಆದರ್ಶವನ್ನು ಪಾಲಿಸಲಾಗಿದೆ. ವೃತ್ತದ ಹೆಸರಿನಲ್ಲಿ ಮಹಾಪುರುಷರ ಹೆಸರು ಶಾಶ್ವತ ಆಗಿರುತ್ತದೆ ಎಂಬುದನ್ನು ಮನಗಂಡು ಇಲ್ಲಿ ಈ ವೃತ್ತ ನಿರ್ಮಿಸಲಾಗಿದೆ. ಸರ್ಕಾರ ಮತ್ತು ಮಹಾನಗರಪಾಲಿಕೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತ ಮುಂದುವರಿದಿದೆ ಎಂದರು.
ಶಾಸಕ ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ ಕೆ., ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮುಡಾ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರ್, ಪಾಲಿಕೆ ಸದಸ್ಯೆ ಸಂಧ್ಯಾ ಆಚಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಭಾಸ್ಕರ್ ಎನ್, ಸದಸ್ಯ ಜಯಾನಂದ ಚೇಳ್ಯಾರ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಸಾಯಿರಾಮ್ ಮತ್ತಿತರರು ಇದ್ದರು.
ಸ್ವಾಗತ ಭಾಷಣ ಮಾಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಶಿವರಾತ್ರಿಗೆ ಮೊದಲು ಗೋಕರ್ಣನಾಥೇಶ್ವರ ಕ್ಷೇತ್ರದ ಎದುರಿನ ರಸ್ತೆಗೆ ವಿಶೇಷ ವಿದ್ಯುತ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು : ಸಿಬಿಐ – Vishwanews24
ವೃತ್ತ ನಿರ್ಮಾಣದಲ್ಲಿ ಭಾಗಿಯಾದ ಗುತ್ತಿಗೆದಾರರು, ಶಿಲ್ಪಿಗಳು ಮತ್ತಿತರರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…