ಮಂಗಳೂರು:ಬ್ರೇಕ್ ಫೇಲ್ ಆದ ಬಸ್ಸನ್ನು ಕ್ಷಣಮಾತ್ರದಲ್ಲಿ ನಿಯಂತ್ರಣಕ್ಕೆ ಪಡೆದು ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರನ್ನು ತಮ್ಮ ಸಮಯ ಪ್ರಜ್ಞೆಯಿಂದ ಖಾಸಗಿ ಬಸ್ ಚಾಲಕ ಅಪಾಯದಿಂದ ಪಾರು ಮಾಡಿದ ಘಟನೆ ಇಂದು ಬೆಳಗ್ಗೆ ಮಂಗಳೂರು ನಗರದ ಬಳ್ಳಾಲ್ಬಾಗ್ನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಶಾಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಬೆಳಿಗ್ಗೆ 8 ಗಂಟೆ ಸಮಯಕ್ಕೆ ನಗರದ ಬಳ್ಳಾಲ್ಬಾಗ್ಗೆ ಆಗಮಿಸುತ್ತಲೇ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಸಿದ್ದೀಕ್ ಎರ್ಮಾಳ್ ಸಮಯಪ್ರಜ್ಞೆ ಮೆರೆದಿದ್ದಾರೆ.
ತಕ್ಷಣವೇ ಬಸ್ನ್ನು ಫುಟ್ಪಾತ್ ಮೇಲೇರಿಸಿ ಯಾವುದೇ ಅನಾಹುತವಾಗದಂತೆ ಪಾರು ಮಾಡಿದ್ದಾರೆ. ಬೆಳಿಗ್ಗೆ ಹೊತ್ತು ಆಗಿದ್ದರಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಆದರೆ ಬಸ್ ಚಾಲಕ ಸಿದ್ದೀಕ್ ಅವರು ತೋರಿದ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸದೇ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ.ಸಿದ್ದೀಕ್ ಅವರ ಸಮಯಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಾಲತಾಣದಲ್ಲಿ ಚಾಲಕನ ಕುರಿತು ಪೋಸ್ಟ್ ಮಾಡಿ ಶ್ಲಾಘಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…