ಮಂಗಳೂರು:ಬ್ರೇಕ್ ಫೇಲ್ ಆದ ಬಸ್ಸನ್ನು ಕ್ಷಣಮಾತ್ರದಲ್ಲಿ ನಿಯಂತ್ರಣಕ್ಕೆ ಪಡೆದು ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರನ್ನು ತಮ್ಮ ಸಮಯ ಪ್ರಜ್ಞೆಯಿಂದ ಖಾಸಗಿ ಬಸ್ ಚಾಲಕ ಅಪಾಯದಿಂದ ಪಾರು ಮಾಡಿದ ಘಟನೆ ಇಂದು ಬೆಳಗ್ಗೆ ಮಂಗಳೂರು ನಗರದ ಬಳ್ಳಾಲ್ಬಾಗ್ನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಶಾಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಬೆಳಿಗ್ಗೆ 8 ಗಂಟೆ ಸಮಯಕ್ಕೆ ನಗರದ ಬಳ್ಳಾಲ್ಬಾಗ್ಗೆ ಆಗಮಿಸುತ್ತಲೇ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಸಿದ್ದೀಕ್ ಎರ್ಮಾಳ್ ಸಮಯಪ್ರಜ್ಞೆ ಮೆರೆದಿದ್ದಾರೆ.
ತಕ್ಷಣವೇ ಬಸ್ನ್ನು ಫುಟ್ಪಾತ್ ಮೇಲೇರಿಸಿ ಯಾವುದೇ ಅನಾಹುತವಾಗದಂತೆ ಪಾರು ಮಾಡಿದ್ದಾರೆ. ಬೆಳಿಗ್ಗೆ ಹೊತ್ತು ಆಗಿದ್ದರಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಆದರೆ ಬಸ್ ಚಾಲಕ ಸಿದ್ದೀಕ್ ಅವರು ತೋರಿದ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸದೇ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ.ಸಿದ್ದೀಕ್ ಅವರ ಸಮಯಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಾಲತಾಣದಲ್ಲಿ ಚಾಲಕನ ಕುರಿತು ಪೋಸ್ಟ್ ಮಾಡಿ ಶ್ಲಾಘಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…