ಮಂಗಳೂರು: ಉಡುಪಿ ಜಿಲ್ಲಾಧಿಕಾರಿಯವರು ಭಗವಾಧ್ವಜ ಹಿಡಿದು ಪರ್ಯಾಯ ಮಹೋತ್ಸವಕ್ಕೆ ಚಾಲನೆ ನೀಡಿದ ವಿಚಾರವನ್ನು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ್ ರೈ ಖಂಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರು ಗಾಂಧಿ ಪ್ರತಿಮೆ ಎದುರು ಆಯೋಜಿಸಿದ್ದ ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ದೇವಸ್ಥಾನಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಎಲ್ಲರಿಗೂ ಸಮಾನವಾಗಿದ್ದು, ಅಲ್ಲಿ ಯಾವುದೇ ರಾಜಕೀಯ ಪ್ರೇರಿತ ಪತಾಕೆಗಳನ್ನು ಹಾರಿಸಬಾರದು ಎಂದು ಸ್ಪಷ್ಟವಾಗಿ ಹೇಳಿದರು.
“ದೇವಸ್ಥಾನದಲ್ಲಿ ಕಾಂಗ್ರೆಸ್, ಕೇಸರಿ ಅಥವಾ ಹಸಿರು ಯಾವುದೇ ಬಣ್ಣದ ಪತಾಕೆಗಳನ್ನು ಬಳಸಬಾರದು. ಧಾರ್ಮಿಕ ಕಾರ್ಯಕ್ರಮಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದು ತಪ್ಪು. ಯಾವುದೇ ರಾಜಕೀಯ ಪ್ರೇರಿತ ಧ್ವಜವನ್ನು ಹಾರಿಸುವುದನ್ನು ನಾವು ದಿಕ್ಕರಿಸಬೇಕು,” ಎಂದು ರಮಾನಾಥ್ ರೈ ಹೇಳಿದರು.
ಕೇಸರಿ ಧ್ವಜ ಹಿಡಿದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ರಮವನ್ನು ಎಲ್ಲಾ ಕಾಂಗ್ರೆಸಿಗರು ತಪ್ಪು ಎಂದು ಪರಿಗಣಿಸಬೇಕು ಎಂದ ಅವರು, ಸಾರ್ವಜನಿಕ ಮತ್ತು ಧಾರ್ಮಿಕ ವೇದಿಕೆಗಳಲ್ಲಿ ರಾಜಕೀಯ ಚಿಹ್ನೆಗಳಿಗೆ ಅವಕಾಶ ನೀಡಬಾರದು ಎಂದು ಅಭಿಪ್ರಾಯಪಟ್ಟರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…