ಮಂಗಳೂರು: ಇಲ್ಲಿನ ಮೂವರು ಭಜರಂಗದಳದ ಕಾರ್ಯಕರ್ತರ ಗಡಿಪಾರು ವಿಚಾರ ಇದೀಗ ರಾಜ್ಯಾದ್ಯಂತ ಚರ್ಚೆಯಾಗ್ತಿದೆ. ಇದೊಂದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಎಂದು ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ಈ ನಡೆಗೆ ಹಿಂದೂ ಸಂಘಟನೆಗಳು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.
ಮಂಗಳೂರಲ್ಲಿ ನೈತಿಕ ಪೊಲೀಸ್ಗಿರಿ ನಡೆಸಿದ್ದ ಭಜರಂಗದಳದ ಮೂವರು ಕಾರ್ಯಕರ್ತರನ್ನು ಗಡಿಪಾರು ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸುಲ್ತಾನ್ ಜ್ಯುವೆಲ್ಲರಿಯ ಕಾರ್ಯಕ್ರಮ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ಭಜರಂಗದಳದ ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಕಾಶ್ ಶಕ್ತಿನಗರ ಎನ್ನುವವರು ನೈತಿಕ ಪೊಲೀಸ್ಗಿರಿ ಪ್ರದರ್ಶಿಸಿದ್ರು. ಈ ಬೆನ್ನಲ್ಲೇ ಪದೇ ಪದೇ ಕಾನೂನುಭಂಗ ಮಾಡ್ತಿರೋ ನಿಮ್ಮನ್ನು ಏಕೆ ಗಡಿಪಾರು ಮಾಡಬಾರದು, ಉತ್ತರಿಸಿ ಎಂದು ನೊಟೀಸ್ ಜಾರಿ ಮಾಡಿದೆ.
ಮಂಗಳೂರು ಪೊಲೀಸ್ ಆಯುಕ್ತರು ಮಾತ್ರ ತಮ್ಮ ಕ್ರಮವನ್ನು ಸಮರ್ಥಿಸಿದ್ದಾರೆ. ಅವರು ನಮಗೆ ಆರೋಪಿಗಳಷ್ಟೇ ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ ಎಂದು ತಿಳಿಸಿದ್ದಾರೆ.
ಗಡಿಪಾರು ನೊಟೀಸ್ಗೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಗೋಹತ್ಯೆ ವಿರುದ್ಧ ಕಾನೂನು ಇದೆ, ಅಕ್ರಮ ಗೋಹತ್ಯೆ ಮಾಡೋದನ್ನು ನೋಡಿ ಸುಮ್ಮನಿರಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ. ಈವರೆಗೆ ಪೊಲೀಸರಿಗೆ ತಿಳಿಸಿಯೇ ದಾಳಿ ಮಾಡುತ್ತಿದ್ದೆವು. ಇನ್ನು ಪೊಲೀಸರಿಗೆ ತಿಳಿಸದೆ ದಾಳಿ ಮಾಡ್ತೀವಿ ಅಂತ ಎಚ್ಚರಿಕೆ ನೀಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…