ಮಂಗಳೂರು: ಇಲ್ಲಿನ ಮೂವರು ಭಜರಂಗದಳದ ಕಾರ್ಯಕರ್ತರ ಗಡಿಪಾರು ವಿಚಾರ ಇದೀಗ ರಾಜ್ಯಾದ್ಯಂತ ಚರ್ಚೆಯಾಗ್ತಿದೆ. ಇದೊಂದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಎಂದು ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ಈ ನಡೆಗೆ ಹಿಂದೂ ಸಂಘಟನೆಗಳು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.
ಮಂಗಳೂರಲ್ಲಿ ನೈತಿಕ ಪೊಲೀಸ್ಗಿರಿ ನಡೆಸಿದ್ದ ಭಜರಂಗದಳದ ಮೂವರು ಕಾರ್ಯಕರ್ತರನ್ನು ಗಡಿಪಾರು ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸುಲ್ತಾನ್ ಜ್ಯುವೆಲ್ಲರಿಯ ಕಾರ್ಯಕ್ರಮ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ಭಜರಂಗದಳದ ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಕಾಶ್ ಶಕ್ತಿನಗರ ಎನ್ನುವವರು ನೈತಿಕ ಪೊಲೀಸ್ಗಿರಿ ಪ್ರದರ್ಶಿಸಿದ್ರು. ಈ ಬೆನ್ನಲ್ಲೇ ಪದೇ ಪದೇ ಕಾನೂನುಭಂಗ ಮಾಡ್ತಿರೋ ನಿಮ್ಮನ್ನು ಏಕೆ ಗಡಿಪಾರು ಮಾಡಬಾರದು, ಉತ್ತರಿಸಿ ಎಂದು ನೊಟೀಸ್ ಜಾರಿ ಮಾಡಿದೆ.
ಮಂಗಳೂರು ಪೊಲೀಸ್ ಆಯುಕ್ತರು ಮಾತ್ರ ತಮ್ಮ ಕ್ರಮವನ್ನು ಸಮರ್ಥಿಸಿದ್ದಾರೆ. ಅವರು ನಮಗೆ ಆರೋಪಿಗಳಷ್ಟೇ ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ ಎಂದು ತಿಳಿಸಿದ್ದಾರೆ.
ಗಡಿಪಾರು ನೊಟೀಸ್ಗೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಗೋಹತ್ಯೆ ವಿರುದ್ಧ ಕಾನೂನು ಇದೆ, ಅಕ್ರಮ ಗೋಹತ್ಯೆ ಮಾಡೋದನ್ನು ನೋಡಿ ಸುಮ್ಮನಿರಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ. ಈವರೆಗೆ ಪೊಲೀಸರಿಗೆ ತಿಳಿಸಿಯೇ ದಾಳಿ ಮಾಡುತ್ತಿದ್ದೆವು. ಇನ್ನು ಪೊಲೀಸರಿಗೆ ತಿಳಿಸದೆ ದಾಳಿ ಮಾಡ್ತೀವಿ ಅಂತ ಎಚ್ಚರಿಕೆ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…