Featured

ಮಂಗಳೂರು:  ಭಾರತೀಯ ಜನತಾ ಪಾರ್ಟಿಯಲ್ಲಿ ನಳಿನ್ ವಿದೂಷಕ ಇದ್ದ ಹಾಗೆ : ಸಿದ್ಧರಾಮಯ್ಯ – Vishwanews24

ಮಂಗಳೂರು:  ಭಾರತೀಯ ಜನತಾ ಪಾರ್ಟಿಯಲ್ಲಿ ನಳಿನ್ ವಿದೂಷಕ ಇದ್ದ ಹಾಗೆ : ಸಿದ್ಧರಾಮಯ್ಯ ವ್ಯಂಗ್ಯ

ಮಂಗಳೂರು: ‘ಈ ಕಟೀಲ್ ಇದ್ದಾರಲ್ಲ ಅವರು ಜೋಕರ್ ಇದ್ದ ಹಾಗೆ. ಅವರು ಬಹಳ ಬಾಲಿಶವಾಗಿ, ಬೇಜವಬ್ದಾರಿಯಿಂದ ಮಾತಾಡ್ತಾರೆ. ಭಾರತೀಯ ಜನತಾ ಪಾರ್ಟಿಯಲ್ಲಿ ಅವರು ವಿದೂಷಕ ಇದ್ದ ಹಾಗೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮಂಗಳೂರು ಹೊರವಲಯದ ಹರೇಕಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಅವರು ಕುದ್ರೋಳಿ ದೇವಳಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.

ನಂತರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ನಾನು ಮುಖ್ಯಮಂತ್ರಿಗೆ ನಾಯಿಮರಿ ಅಂತ ಹೇಳಿಲ್ಲ. ಧೈರ್ಯವಿರಬೇಕು. ಧೈರ್ಯದಲ್ಲಿ ಕೇಂದ್ರ ಸರ್ಕಾರದ ಜೊತೆ ಮಾತನಾಡಬೇಕು.

ಅಲ್ಲಿಂದ ಅನುದಾನ ಬರೋದು ಕಡಿಮೆ ಆಗಿದೆ. ನಾಯಿಮರಿ ಥರ ಇರಬೇಡಿ ಅಂತ ಹೇಳಿದಷ್ಟೇ. ನಮಗೆ ಟಗರು, ಹುಲಿಯ ಅಂತಾರೆ ಹಾಗಂದ ಮಾತ್ರಕ್ಕೆ ನಾನು ಟಗರು ಆದ್ನಾ…?

ಯಡಿಯೂರಪ್ಪನವರನ್ನು ರಾಜಾಹುಲಿ ಅಂತಾರೆ. ಅದೂ ಅವರ ಪಕ್ಷದವರೇ ಕರೆಯೋದು. ಹಾಗಂದ ಮಾತ್ರಕ್ಕೆ ಯಡಿಯೂರಪ್ಪ ಹುಲಿನಾ…? ಇವರ ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲದೆ ಏನೂ ನಡೆಯೋದಿಲ್ಲ. ಎಲ್ಲದರಲ್ಲೂ ಲಂಚ ಲಂಚ’ ಎಂದು ಹೇಳಿದರು.

ಮತ್ತೆ ಮಾಧ್ಯಮದವರು ನಳಿನ್ ಕುಮಾರ್ ಕಟೀಲ್ ಬಗ್ಗೆ ಪ್ರಶ್ನೆ ಮಾಡಲು ಹೋದಾಗ ‘ಐ ಡು ನಾಟ್ ರಿಪ್ಲೈ ಟು ಮಿಸ್ಟರ್ ಕಟೀಲ್. ಬಿಕಾಸ್ ಹಿ ಇಸ್ ಜೋಕರ್ ಆಫ್ ಬಿಜೆಪಿ ಪಾರ್ಟಿ’ ಎಂದು ನುಡಿದಿದ್ದಾರೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

31 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

35 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago