Featured

ಮಂಗಳೂರು:  ಭಾರತೀಯ ಜನತಾ ಪಾರ್ಟಿಯಲ್ಲಿ ನಳಿನ್ ವಿದೂಷಕ ಇದ್ದ ಹಾಗೆ : ಸಿದ್ಧರಾಮಯ್ಯ – Vishwanews24

ಮಂಗಳೂರು:  ಭಾರತೀಯ ಜನತಾ ಪಾರ್ಟಿಯಲ್ಲಿ ನಳಿನ್ ವಿದೂಷಕ ಇದ್ದ ಹಾಗೆ : ಸಿದ್ಧರಾಮಯ್ಯ ವ್ಯಂಗ್ಯ

ಮಂಗಳೂರು: ‘ಈ ಕಟೀಲ್ ಇದ್ದಾರಲ್ಲ ಅವರು ಜೋಕರ್ ಇದ್ದ ಹಾಗೆ. ಅವರು ಬಹಳ ಬಾಲಿಶವಾಗಿ, ಬೇಜವಬ್ದಾರಿಯಿಂದ ಮಾತಾಡ್ತಾರೆ. ಭಾರತೀಯ ಜನತಾ ಪಾರ್ಟಿಯಲ್ಲಿ ಅವರು ವಿದೂಷಕ ಇದ್ದ ಹಾಗೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮಂಗಳೂರು ಹೊರವಲಯದ ಹರೇಕಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಅವರು ಕುದ್ರೋಳಿ ದೇವಳಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.

ನಂತರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ನಾನು ಮುಖ್ಯಮಂತ್ರಿಗೆ ನಾಯಿಮರಿ ಅಂತ ಹೇಳಿಲ್ಲ. ಧೈರ್ಯವಿರಬೇಕು. ಧೈರ್ಯದಲ್ಲಿ ಕೇಂದ್ರ ಸರ್ಕಾರದ ಜೊತೆ ಮಾತನಾಡಬೇಕು.

ಅಲ್ಲಿಂದ ಅನುದಾನ ಬರೋದು ಕಡಿಮೆ ಆಗಿದೆ. ನಾಯಿಮರಿ ಥರ ಇರಬೇಡಿ ಅಂತ ಹೇಳಿದಷ್ಟೇ. ನಮಗೆ ಟಗರು, ಹುಲಿಯ ಅಂತಾರೆ ಹಾಗಂದ ಮಾತ್ರಕ್ಕೆ ನಾನು ಟಗರು ಆದ್ನಾ…?

ಯಡಿಯೂರಪ್ಪನವರನ್ನು ರಾಜಾಹುಲಿ ಅಂತಾರೆ. ಅದೂ ಅವರ ಪಕ್ಷದವರೇ ಕರೆಯೋದು. ಹಾಗಂದ ಮಾತ್ರಕ್ಕೆ ಯಡಿಯೂರಪ್ಪ ಹುಲಿನಾ…? ಇವರ ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲದೆ ಏನೂ ನಡೆಯೋದಿಲ್ಲ. ಎಲ್ಲದರಲ್ಲೂ ಲಂಚ ಲಂಚ’ ಎಂದು ಹೇಳಿದರು.

ಮತ್ತೆ ಮಾಧ್ಯಮದವರು ನಳಿನ್ ಕುಮಾರ್ ಕಟೀಲ್ ಬಗ್ಗೆ ಪ್ರಶ್ನೆ ಮಾಡಲು ಹೋದಾಗ ‘ಐ ಡು ನಾಟ್ ರಿಪ್ಲೈ ಟು ಮಿಸ್ಟರ್ ಕಟೀಲ್. ಬಿಕಾಸ್ ಹಿ ಇಸ್ ಜೋಕರ್ ಆಫ್ ಬಿಜೆಪಿ ಪಾರ್ಟಿ’ ಎಂದು ನುಡಿದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago