ಮಂಗಳೂರು: “ಕಳೆದ ರಾತ್ರಿಯಿಂದ ಮಳೆ ಬಿರುಸು ಪಡೆದಿದ್ದು, ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದ ವಿದ್ಯಾರ್ಥಿಗಳಿಗೆ ಇಂದು ರಜೆ ಸಾರಲಾಗಿದೆ” ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.
ಆದರೆ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಎಂದಿನಂತೆ ಕಾರ್ಯ ನಿರ್ವಹಿಸಲು ಹಾಗೂ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಆ ಮಕ್ಕಳಿಗೆ ಒಂದು ದಿನ ರಜೆ ಸಾರುವಂತೆ ಹಾಗೂ ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂರೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ವಿದ್ಯಾರ್ಥಿಗಳು ಈಗಾಗಲೇ ಶಾಲೆಗೆ ಬಂದರೆ ಅವರನ್ನು ವಾಪಸ್ ಕಳುಹಿಸುವ ಮತ್ತು ತರಗತಿಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಡಿಸಿ ಸ್ಪಷ್ಟವಾಗಿ ಸೂಚಿಸಿದ್ದಾರೆ.
ತಾಲ್ಲೂಕುಗಳಲ್ಲಿ, ತಹಶೀಲ್ದಾರ್, ಶಿಕ್ಷಣ ಅಧಿಕಾರಿಗಳಿಗೆ ಗಳಿಗೆ ಪರಿಸ್ಥಿತಿಯನ್ನು ಅವಲೋಕಿ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ ಎಂದು ಡಿಸಿ ತಿಳಿಸಿದ್ದಾರೆ.
ಇನ್ನು ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತೀವ್ರವಾದ ಮಳೆ ಹಿನ್ನಲೆ ರಜೆ ಘೋಷಿಸಲಾಗಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…