ಮಂಗಳೂರು: “ಕಳೆದ ರಾತ್ರಿಯಿಂದ ಮಳೆ ಬಿರುಸು ಪಡೆದಿದ್ದು, ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದ ವಿದ್ಯಾರ್ಥಿಗಳಿಗೆ ಇಂದು ರಜೆ ಸಾರಲಾಗಿದೆ” ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.
ಆದರೆ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಎಂದಿನಂತೆ ಕಾರ್ಯ ನಿರ್ವಹಿಸಲು ಹಾಗೂ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಆ ಮಕ್ಕಳಿಗೆ ಒಂದು ದಿನ ರಜೆ ಸಾರುವಂತೆ ಹಾಗೂ ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂರೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ವಿದ್ಯಾರ್ಥಿಗಳು ಈಗಾಗಲೇ ಶಾಲೆಗೆ ಬಂದರೆ ಅವರನ್ನು ವಾಪಸ್ ಕಳುಹಿಸುವ ಮತ್ತು ತರಗತಿಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಡಿಸಿ ಸ್ಪಷ್ಟವಾಗಿ ಸೂಚಿಸಿದ್ದಾರೆ.
ತಾಲ್ಲೂಕುಗಳಲ್ಲಿ, ತಹಶೀಲ್ದಾರ್, ಶಿಕ್ಷಣ ಅಧಿಕಾರಿಗಳಿಗೆ ಗಳಿಗೆ ಪರಿಸ್ಥಿತಿಯನ್ನು ಅವಲೋಕಿ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ ಎಂದು ಡಿಸಿ ತಿಳಿಸಿದ್ದಾರೆ.
ಇನ್ನು ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತೀವ್ರವಾದ ಮಳೆ ಹಿನ್ನಲೆ ರಜೆ ಘೋಷಿಸಲಾಗಿದೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…