Featured

ಮಂಗಳೂರು: ಭಿಕ್ಷೆ ಬೇಡಿದ ಲಕ್ಷ ರೂ. ಹಣವನ್ನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅನ್ನದಾನಕ್ಕೆ ನೀಡಿದ ವೃದ್ದೆ  – Vishwanews24

ಮಂಗಳೂರು: ಭಿಕ್ಷೆ ಬೇಡಿದ ಲಕ್ಷ ರೂ. ಹಣವನ್ನ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದ ಅನ್ನದಾನಕ್ಕೆ ನೀಡಿದ ವೃದ್ದೆ

ಮಂಗಳೂರು: ಭಿಕ್ಷೆ ಬೇಡಿ ಸಂಗ್ರಹಿಸಿದ ಒಂದು ಲಕ್ಷ ರೂ. ಹಣವನ್ನು ವೃದ್ದೆಯೊಬ್ಬರು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದ ಅನ್ನದಾನದ ನಿಧಿಗೆ ನೀಡಿ ಮಾದರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಕಂಚಿಗೋಡು ನಿವಾಸಿ 80ರ ಹರೆಯದ ಅಶ್ವಥಮ್ಮ ದೇವಸ್ಥಾನಕ್ಕೆ ಭಿಕ್ಷೆಯ ಹಣ ದೇಣಿಗೆ ನೀಡಿದವರು. ವರ್ಷದ ಬಹುತೇಕ ಸಮಯ ಅಯ್ಯಪ್ಪ ಮಾಲಾಧಾರಿಯಾಗಿಯೇ ಇರುವ ಆಶ್ವಥಮ್ಮ ಹಲವು ದೇವಸ್ಥಾನಗಳಲ್ಲಿ ಭಿಕ್ಷೆ ಬೇಡುತ್ತಾರೆ.

ಅದೇ ರೀತಿ ಪೊಳಲಿ ರಾಜರಾಜೇಶ್ವರಿ ದೇವಸ್ಥಾನ ಹಾಗೂ ಕರಾವಳಿಯ ಇತರೆ ದೇವಸ್ಥಾನಗಳಲ್ಲಿ ಭಿಕ್ಷೆ ಬೇಡಿ ಸಂಗ್ರಹಿಸಿದ ಒಂದು ಲಕ್ಷ ರೂ. ಹಣವನ್ನು ಪೊಳಲಿ ದೇವಸ್ಥಾನದ ಅನ್ನದಾನ ನಿಧಿಗೆ ಸಮರ್ಪಿಸಿ ಮಾದರಿಯಾಗಿದ್ದಾರೆ. ಇವರ ಮಕ್ಕಳು ಇಹಲೋಕ ತ್ಯಜಿಸಿದ್ದು, ಇಬ್ಬರು ಮೊಮ್ಮಕ್ಕಳು ಮೀನುಗಾರಿಕೆ ನಡೆಸುತ್ತಿದ್ದಾರೆ.

ವಿಶೇಷವೆಂದ್ರೆ ಇವರು ಭಿಕ್ಷೆ ಬೇಡಿದ ಒಂದಷ್ಟು ಮೊತ್ತವನ್ನ ಕುಟುಂಬ ನಿರ್ವಹಣೆಗೆ ಬಳಸಿದ್ರೆ ಉಳಿದ ಹಣವನ್ನ ಸಂಗ್ರಹಿಸಿಟ್ಟು ದೇವಾಲಯಗಳಿಗೆ ದೇಣಿಗೆ ನೀಡುವುದು ಅಭ್ಯಾಸ. ಬೆಳಿಗ್ಗಿನಿಂದ ಸಂಜೆಯವರೆಗೆ ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ಪಿಗ್ಮಿಗೆ ಕಟ್ಟಿ ಅಲ್ಲಿ ಜಮೆಯಾದ ಹಣವನ್ನು ದೇವಸ್ಥಾನಗಳಿಗೆ ದೇಣಿಗೆ ನೀಡುತ್ತಿದ್ದಾರೆ.

ಸುಮಾರು 18 ವರ್ಷಗಳಿಂದ ಆಶ್ವಥಮ್ಮ ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ದೇವಸ್ಥಾನಗಳಿಗೆ ಈ ರೀತಿ ಹಣವನ್ನು ದೇಣಿಗೆ ನೀಡಿದ್ದಾರೆ. ಈವರೆಗೆ ಇವರು ದೇಣಿಗೆ ನೀಡಿದ ಹಣ ಲಕ್ಷಾಂತರ ರೂ. ಕೆರೆಯ ನೀರನು ಕೆರೆಗೆ ಚೆಲ್ಲಿದಂತೆ ದೇವಸ್ಥಾನದ ಬಳಿ ಬೇಡಿದ ಹಣವನ್ನು ಹಸಿದ ಹೊಟ್ಟೆಯಲ್ಲಿ ಯಾರೂ ಇರಬಾರದು ಅನ್ನೋ ಉದ್ದೇಶದಿಂದ ದೇವಸ್ಥಾನದ ಅನ್ನದಾನಕ್ಕೆ ನೀಡುತ್ತಿದ್ದಾರೆ.

ಆಶ್ವಥಮ್ಮರ ಈ ಸಮಾಜಮುಖಿ ಕಾರ್ಯದ ಲೆಕ್ಕ ಹಾಕಿದ್ರೆ ಅದರ ಪಾಲು ದೊಡ್ಡದಿದೆ. 80ರ ಇಳಿ ವಯಸ್ಸಿನಲ್ಲೂ ಈ ವೃದ್ದೆ ಭಿಕ್ಷಾಟನೆ ಮೂಲಕ ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬಂತೆ ಬದುಕುತ್ತಿದ್ದಾರೆ. ಹೀಗೆ ಆಶ್ವಥಮ್ಮ ಭಿಕ್ಷೆ ಬೇಡಿದ ಹಣವನ್ನ ದೇವಸ್ಥಾನಗಳ ಧಾರ್ಮಿಕ ಕಾರ್ಯ, ದೇಗುಲಗಳ ಸಾಮಾಜಿಕ ಕಾರ್ಯಗಳಿಗೆ ಅರ್ಪಿಸಿದ್ದಾರೆ.

ಹೀಗೆ ದಾನವಾಗಿ ನೀಡಿದ ಹಣವೇ ಬರೋಬ್ಬರಿ 6 ಲಕ್ಷ ರೂಪಾಯಿಗಳು. ಇವರ ಪತಿ 18 ವರ್ಷಗಳ ಹಿಂದೆ ನಿಧನರಾಗಿದ್ದು, ಆ ಬಳಿಕ ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

17 ವರ್ಷಗಳ ಹಿಂದೆ ತನ್ನ ಮೊಮ್ಮಗಳಿಗೆ ಮಾಲೆ ಹಾಕಿಸಿ ಶಬರಿಮಲೆಗೆ ತೆರಳಿ ಪಂದಳ, ಎರಿಮಲೆ, ಪಂಪೆಯಲ್ಲಿ 1 ಲಕ್ಷಕ್ಕೂ ಅಧಿಕ ಮಂದಿಗೆ ಅನ್ನದಾನ ನೀಡಿದ್ದಾರೆ. ಸಾಲಿಗ್ರಾಮ ಶ್ರೀಗುರು ನರಸಿಂಹ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ, ಪೊಳಲಿ ಅಖಿಲೇಶ್ವರ ದೇವಸ್ಥಾನದ ಅಯ್ಯಪ್ಪ ವೃತಧಾರಿಗಳಿಗೆ 1.50ಲಕ್ಷ ಸೇರಿ ಗಂಗೊಳ್ಳಿ ದೇವಾಲಯದಲ್ಲೂ ಅನ್ನದಾನ ಕೊಡಿಸಿದ್ದಾರೆ. ಇದರ ಜೊತೆ ಕರಾವಳಿ ಜಿಲ್ಲೆಗಳ ಹಲವು ಅನಾಥಾಶ್ರಮಗಳಿಗೂ ದೇಣಿಗೆ ನೀಡಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

3 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

3 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

3 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

4 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago