Featured

ಮಂಗಳೂರು : ಭ್ರಷ್ಟಾಚಾರ ಆರೋಪ – ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು – Vishwanews24

ಮಂಗಳೂರು : ಭ್ರಷ್ಟಾಚಾರ ಆರೋಪ – ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು

ಮಂಗಳೂರು : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್‌ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್‌ ಅಮಾನತುಗೊಳಿಸಿದ್ದಾರೆ.

ಈ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್‌ ಆಗಿ ಅಧಿಕಾರ ಸ್ವೀಕರಿಸಿಕೊಂಡ ಬೆನ್ನಲ್ಲೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳಿದ್ದ ಕುಲದೀಪ್‌ ಆರ್ ಜೈನ್‌ ಇದೀಗ ತಾವು ನುಡಿದಂತೆ ನಡೆದುಕೊಂಡಿದ್ದಾರೆ.

ಘಟನೆಯ ವಿವರ :
ಗಂಡ ಹೆಂಡತಿ ಗಲಾಟೆ ವಿಚಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದಿದ್ದ ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಖಾಸಗಿ ವಾಹನದಲ್ಲಿ ಹೋಗಿ ಪಾರ್ಟಿಯ ಜೊತೆ ಸಂಧಾನ ನಡೆಸುವ ನೆಪದಲ್ಲಿ ವ್ಯವಹಾರ ಕುದುರಿಸಿದ್ದರು.

ಇದನ್ನು ಪ್ರತಿದೂರುದಾರರು ಗಮನಿಸಿ ವಿಡಿಯೋ ಮಾಡುತ್ತಿದ್ದಾಗ ಗಮನಿಸಿದ ಶ್ರೀಲತಾ, ಪಾಂಡೇಶ್ವರ ಠಾಣೆಯಲ್ಲಿ ತನ್ನ ಕರ್ತವ್ಯಕ್ಕೆ ಅಡ್ಡಿ ಎಂದು ದೂರು ದಾಖಲಿಸಿದ್ದರು.ಇದು ನ್ಯಾಯಕ್ಕಾಗಿ ಠಾಣೆ ಮೆಟ್ಟಲೇರಿದ ತಂಡದ ಆಕ್ರೋಶಕ್ಕೆ ಕಾರಣವಾಗಿತ್ತು. ತಮಗಾದ ಅನ್ಯಾಯದ ಬಗ್ಗೆ ಹಾಗೂ ಶ್ರೀಲತಾ ಬೇಡಿಕೆ ಇರಿಸಿದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರನ್ನು ನೀಡಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಡಿಸಿಪಿ ಅಂಶುಕುಮಾರ್‌ ತನಿಖೆಗೆ ಆದೇಶಿಸಿದ್ದರು.ಕಮಿಷನರ್‌ ವರ್ಗಾವಣೆಯಾದ ಬಳಿಕ ಅಧಿಕಾರ ಸ್ವೀಕರಿಸಿದ ನೂತನ ಕಮಿಷನರ್‌ ಕುಲದೀಪ್‌ ಅವರು ಮೊದಲ ಕೆಲಸವಾಗಿ ಶ್ರೀಲತಾ ಅವರನ್ನು ಅಮಾನತುಗೊಳಿಸಿದ್ದಾರೆ.ಈ ಮೂಲಕ ಇಲಾಖೆ ಒಳಗೂ- ಹೊರಗೂ ಭ್ರಷ್ಟಚಾರ ಸಹಿಸಲ್ಲ ಎಂದು ನೇರಾ ಸಂದೇಶ ರವಾನಿಸಿದ್ದಾರೆ.

ಹೆಡ್‌ ಕಾನ್‌ಸ್ಟೇಬಲ್‌ ಶ್ರೀಲತಾ ವಿರುದ್ಧ ಈ ಹಿಂದೆ ಇಂತಹ ಅನೇಕ ಪ್ರಕರಣಗಳಲ್ಲಿ ಸಂಧಾನ ಮಾಡಿ ಹಣ ಮಾಡಿದ ಆರೋಪ ಕೇಳಿ ಬಂದಿತ್ತು. ಪದೇ ಪದೇ ಭ್ರಷ್ಟಾಚಾರ ಆರೋಪಗಳು ಕೇಳಿ ಬರುತ್ತಿದ್ದವು. ಈ ಹಿಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದಾಗ ಗಂಡ ಹಂಡತಿ ಪ್ರಕರಣದಲ್ಲಿ ಇದೇ ರೀತಿ ಗಲಾಟೆ ಆಗಿ ರಾಧಾಂತವಾಗಿತ್ತು. ಬಳಿಕ ಠಾಣೆಯಲ್ಲಿದ್ದ ಸಿಸಿಟಿವಿ ಫೂಟೇಜ್‌ಗಳನ್ನೆಲ್ಲಾ ಶ್ರೀಲತಾ ಡಿಲೀಟ್‌ ಮಾಡಿಸಿದ್ದರು. ಅಷ್ಟೇ ಅಲ್ಲದೆ ತನ್ನ ಕರ್ತವ್ಯಕ್ಕೆ ಅಡ್ಡಿ ಎಂದು ದೂರುದಾರರ ಮೇಲೆ ಪ್ರಕರಣ ದಾಖಲಿಸಿದ್ದರು.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

17 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

17 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

17 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

17 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

18 hours ago