Featured

ಮಂಗಳೂರು : ಭ್ರಷ್ಟಾಚಾರ ಆರೋಪ – ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು – Vishwanews24

ಮಂಗಳೂರು : ಭ್ರಷ್ಟಾಚಾರ ಆರೋಪ – ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು

ಮಂಗಳೂರು : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್‌ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್‌ ಅಮಾನತುಗೊಳಿಸಿದ್ದಾರೆ.

ಈ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್‌ ಆಗಿ ಅಧಿಕಾರ ಸ್ವೀಕರಿಸಿಕೊಂಡ ಬೆನ್ನಲ್ಲೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳಿದ್ದ ಕುಲದೀಪ್‌ ಆರ್ ಜೈನ್‌ ಇದೀಗ ತಾವು ನುಡಿದಂತೆ ನಡೆದುಕೊಂಡಿದ್ದಾರೆ.

ಘಟನೆಯ ವಿವರ :
ಗಂಡ ಹೆಂಡತಿ ಗಲಾಟೆ ವಿಚಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದಿದ್ದ ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಖಾಸಗಿ ವಾಹನದಲ್ಲಿ ಹೋಗಿ ಪಾರ್ಟಿಯ ಜೊತೆ ಸಂಧಾನ ನಡೆಸುವ ನೆಪದಲ್ಲಿ ವ್ಯವಹಾರ ಕುದುರಿಸಿದ್ದರು.

ಇದನ್ನು ಪ್ರತಿದೂರುದಾರರು ಗಮನಿಸಿ ವಿಡಿಯೋ ಮಾಡುತ್ತಿದ್ದಾಗ ಗಮನಿಸಿದ ಶ್ರೀಲತಾ, ಪಾಂಡೇಶ್ವರ ಠಾಣೆಯಲ್ಲಿ ತನ್ನ ಕರ್ತವ್ಯಕ್ಕೆ ಅಡ್ಡಿ ಎಂದು ದೂರು ದಾಖಲಿಸಿದ್ದರು.ಇದು ನ್ಯಾಯಕ್ಕಾಗಿ ಠಾಣೆ ಮೆಟ್ಟಲೇರಿದ ತಂಡದ ಆಕ್ರೋಶಕ್ಕೆ ಕಾರಣವಾಗಿತ್ತು. ತಮಗಾದ ಅನ್ಯಾಯದ ಬಗ್ಗೆ ಹಾಗೂ ಶ್ರೀಲತಾ ಬೇಡಿಕೆ ಇರಿಸಿದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರನ್ನು ನೀಡಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಡಿಸಿಪಿ ಅಂಶುಕುಮಾರ್‌ ತನಿಖೆಗೆ ಆದೇಶಿಸಿದ್ದರು.ಕಮಿಷನರ್‌ ವರ್ಗಾವಣೆಯಾದ ಬಳಿಕ ಅಧಿಕಾರ ಸ್ವೀಕರಿಸಿದ ನೂತನ ಕಮಿಷನರ್‌ ಕುಲದೀಪ್‌ ಅವರು ಮೊದಲ ಕೆಲಸವಾಗಿ ಶ್ರೀಲತಾ ಅವರನ್ನು ಅಮಾನತುಗೊಳಿಸಿದ್ದಾರೆ.ಈ ಮೂಲಕ ಇಲಾಖೆ ಒಳಗೂ- ಹೊರಗೂ ಭ್ರಷ್ಟಚಾರ ಸಹಿಸಲ್ಲ ಎಂದು ನೇರಾ ಸಂದೇಶ ರವಾನಿಸಿದ್ದಾರೆ.

ಹೆಡ್‌ ಕಾನ್‌ಸ್ಟೇಬಲ್‌ ಶ್ರೀಲತಾ ವಿರುದ್ಧ ಈ ಹಿಂದೆ ಇಂತಹ ಅನೇಕ ಪ್ರಕರಣಗಳಲ್ಲಿ ಸಂಧಾನ ಮಾಡಿ ಹಣ ಮಾಡಿದ ಆರೋಪ ಕೇಳಿ ಬಂದಿತ್ತು. ಪದೇ ಪದೇ ಭ್ರಷ್ಟಾಚಾರ ಆರೋಪಗಳು ಕೇಳಿ ಬರುತ್ತಿದ್ದವು. ಈ ಹಿಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದಾಗ ಗಂಡ ಹಂಡತಿ ಪ್ರಕರಣದಲ್ಲಿ ಇದೇ ರೀತಿ ಗಲಾಟೆ ಆಗಿ ರಾಧಾಂತವಾಗಿತ್ತು. ಬಳಿಕ ಠಾಣೆಯಲ್ಲಿದ್ದ ಸಿಸಿಟಿವಿ ಫೂಟೇಜ್‌ಗಳನ್ನೆಲ್ಲಾ ಶ್ರೀಲತಾ ಡಿಲೀಟ್‌ ಮಾಡಿಸಿದ್ದರು. ಅಷ್ಟೇ ಅಲ್ಲದೆ ತನ್ನ ಕರ್ತವ್ಯಕ್ಕೆ ಅಡ್ಡಿ ಎಂದು ದೂರುದಾರರ ಮೇಲೆ ಪ್ರಕರಣ ದಾಖಲಿಸಿದ್ದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

8 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago