Featured

ಮಂಗಳೂರು : ಭ್ರಷ್ಟಾಚಾರ ಆರೋಪ – ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು – Vishwanews24

ಮಂಗಳೂರು : ಭ್ರಷ್ಟಾಚಾರ ಆರೋಪ – ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು

ಮಂಗಳೂರು : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್‌ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್‌ ಅಮಾನತುಗೊಳಿಸಿದ್ದಾರೆ.

ಈ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್‌ ಆಗಿ ಅಧಿಕಾರ ಸ್ವೀಕರಿಸಿಕೊಂಡ ಬೆನ್ನಲ್ಲೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳಿದ್ದ ಕುಲದೀಪ್‌ ಆರ್ ಜೈನ್‌ ಇದೀಗ ತಾವು ನುಡಿದಂತೆ ನಡೆದುಕೊಂಡಿದ್ದಾರೆ.

ಘಟನೆಯ ವಿವರ :
ಗಂಡ ಹೆಂಡತಿ ಗಲಾಟೆ ವಿಚಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದಿದ್ದ ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಖಾಸಗಿ ವಾಹನದಲ್ಲಿ ಹೋಗಿ ಪಾರ್ಟಿಯ ಜೊತೆ ಸಂಧಾನ ನಡೆಸುವ ನೆಪದಲ್ಲಿ ವ್ಯವಹಾರ ಕುದುರಿಸಿದ್ದರು.

ಇದನ್ನು ಪ್ರತಿದೂರುದಾರರು ಗಮನಿಸಿ ವಿಡಿಯೋ ಮಾಡುತ್ತಿದ್ದಾಗ ಗಮನಿಸಿದ ಶ್ರೀಲತಾ, ಪಾಂಡೇಶ್ವರ ಠಾಣೆಯಲ್ಲಿ ತನ್ನ ಕರ್ತವ್ಯಕ್ಕೆ ಅಡ್ಡಿ ಎಂದು ದೂರು ದಾಖಲಿಸಿದ್ದರು.ಇದು ನ್ಯಾಯಕ್ಕಾಗಿ ಠಾಣೆ ಮೆಟ್ಟಲೇರಿದ ತಂಡದ ಆಕ್ರೋಶಕ್ಕೆ ಕಾರಣವಾಗಿತ್ತು. ತಮಗಾದ ಅನ್ಯಾಯದ ಬಗ್ಗೆ ಹಾಗೂ ಶ್ರೀಲತಾ ಬೇಡಿಕೆ ಇರಿಸಿದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರನ್ನು ನೀಡಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಡಿಸಿಪಿ ಅಂಶುಕುಮಾರ್‌ ತನಿಖೆಗೆ ಆದೇಶಿಸಿದ್ದರು.ಕಮಿಷನರ್‌ ವರ್ಗಾವಣೆಯಾದ ಬಳಿಕ ಅಧಿಕಾರ ಸ್ವೀಕರಿಸಿದ ನೂತನ ಕಮಿಷನರ್‌ ಕುಲದೀಪ್‌ ಅವರು ಮೊದಲ ಕೆಲಸವಾಗಿ ಶ್ರೀಲತಾ ಅವರನ್ನು ಅಮಾನತುಗೊಳಿಸಿದ್ದಾರೆ.ಈ ಮೂಲಕ ಇಲಾಖೆ ಒಳಗೂ- ಹೊರಗೂ ಭ್ರಷ್ಟಚಾರ ಸಹಿಸಲ್ಲ ಎಂದು ನೇರಾ ಸಂದೇಶ ರವಾನಿಸಿದ್ದಾರೆ.

ಹೆಡ್‌ ಕಾನ್‌ಸ್ಟೇಬಲ್‌ ಶ್ರೀಲತಾ ವಿರುದ್ಧ ಈ ಹಿಂದೆ ಇಂತಹ ಅನೇಕ ಪ್ರಕರಣಗಳಲ್ಲಿ ಸಂಧಾನ ಮಾಡಿ ಹಣ ಮಾಡಿದ ಆರೋಪ ಕೇಳಿ ಬಂದಿತ್ತು. ಪದೇ ಪದೇ ಭ್ರಷ್ಟಾಚಾರ ಆರೋಪಗಳು ಕೇಳಿ ಬರುತ್ತಿದ್ದವು. ಈ ಹಿಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದಾಗ ಗಂಡ ಹಂಡತಿ ಪ್ರಕರಣದಲ್ಲಿ ಇದೇ ರೀತಿ ಗಲಾಟೆ ಆಗಿ ರಾಧಾಂತವಾಗಿತ್ತು. ಬಳಿಕ ಠಾಣೆಯಲ್ಲಿದ್ದ ಸಿಸಿಟಿವಿ ಫೂಟೇಜ್‌ಗಳನ್ನೆಲ್ಲಾ ಶ್ರೀಲತಾ ಡಿಲೀಟ್‌ ಮಾಡಿಸಿದ್ದರು. ಅಷ್ಟೇ ಅಲ್ಲದೆ ತನ್ನ ಕರ್ತವ್ಯಕ್ಕೆ ಅಡ್ಡಿ ಎಂದು ದೂರುದಾರರ ಮೇಲೆ ಪ್ರಕರಣ ದಾಖಲಿಸಿದ್ದರು.

 

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

2 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

2 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

2 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

3 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

4 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago