Featured

ಮಂಗಳೂರು: ಮಂಗಳಾದೇವಿ ನವರಾತ್ರಿ ಉತ್ಸವ – ಸಂತೆಯ ಹಿಂದೂ ವ್ಯಾಪಾರಿಗಳ ಸ್ಟಾಲ್‌ಗಳಿಗೆ ಕೇಸರಿ ಧ್ವಜ ಕಟ್ಟಿದ ಬಜರಂಗದಳ..Vishwanews24

ಮಂಗಳೂರು: ಮಂಗಳಾದೇವಿ ನವರಾತ್ರಿ ಉತ್ಸವ – ಸಂತೆಯ ಹಿಂದೂ ವ್ಯಾಪಾರಿಗಳ ಸ್ಟಾಲ್‌ಗಳಿಗೆ ಕೇಸರಿ ಧ್ವಜ ಕಟ್ಟಿದ ಬಜರಂಗದಳ..

ಮಂಗಳೂರು: ಹಿಂದೂ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ದ.ಕ.ಜಿಲ್ಲಾಡಳಿತ ನಗರದ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ಸಂತೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ಅವಕಾಶ ನೀಡಿದೆ.

ಜಿಲ್ಲಾಡಳಿತದ ಈ ನಿರ್ಧಾರ ಹೀಮಧೂ ಸಂಘಟನೆಗಳ ಕಣ್ಣು ಕೆಂಪಾಗಿರಿಸಿದೆ. ಇದಕ್ಕೆ ಟಕ್ಕರ್ ನೀಡಲು ಹಿಂದೂಗಳು ನಡೆಸುವ ಸ್ಟಾಲ್‌ಗಳಿಗೆ ಕೇಸರಿ ಧ್ವಜ ಗಳನ್ನು ಕಟ್ಟಿ ಹಿಂದೂಗಳು ಈ ಅಂಗಡಿಯಲ್ಲಿ ವ್ಯಾಪಾರ ಮಾಡಬೇಕೆಂದು ಕರೆ ನೀಡಿದೆ. ಈ ಬಗ್ಗೆ ಪ್ರತಿಕ್ರೀಯಿಸಿರುವ ವಿಎಚ್ ಪಿ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ದೇವಸ್ಥಾನದ ಆಸುಪಾಸಿನಲ್ಲಿ ಹಿಂದೂಗಳಿಗೆ ಅವಕಾಶ ನೀಡಬೇಕು. ಹಿಂದೂ ದೇವರನ್ನು ನಂಬದ, ಮೂರ್ತಿ ಪೂಜೆ ವಿರೋಧಿಗಳಿಗೆ ನಮ್ಮ ಉತ್ಸವದಲ್ಲಿ ಯಾಕೆ ಅವಕಾಶ ಕೊಡಬೇಕು, ಜಿಲ್ಲಾಡಳಿತದ ಈ ನೀತಿ ಹಿಂದೂ ವಿರೋಧಿಯಾಗಿದೆ.

ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರುವ ದೇವಸ್ಥಾನದಲ್ಲಿ ಹಿಂದೂಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬೇಕು, ನಾವೂ ಮುಸಲ್ಮಾನ್ ವ್ಯಾಪಾರಿಗಳ ವಿರೋಧಗಳಲ್ಲ ನಮ್ಮ ದೇವಸ್ಥಾನದ ಸುತ್ತ ಮುತ್ತ ಮೊದಲು ಹಿಂದುಗಳಿಗೆ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದಿದ್ದಾರೆ. ಈ ಹಿಂದೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಿಸಿದ ಸಂದರ್ಭ, ಬೀದಿ ಬದಿ ವ್ಯಾಪಾರಸ್ಥರ ಸಮನ್ವಯ ಸಮಿತಿ ದೇವಸ್ಥಾನದ ಎರಡು ಬದಿಯ ರಸ್ತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ್ದು, ಇಲ್ಲಿ ಯಾರು ಬೇಕಾದರೂ ವ್ಯಾಪಾರ ನಡೆಸಬಹುದು ಎಂದಿತ್ತು, ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬರುವ ನೂರಾರು ವರ್ಷಗಳ ಮುನ್ನವೇ ಈ ಜಾಗದಲ್ಲಿ ದೇವಸ್ಥಾನವಿತ್ತು.

ಇದೇ ರಸ್ತೆಯಲ್ಲಿ ದೇವರ ರಥ ಓಡಾಡುತ್ತೆ,ಮೊದಲು ಇದು ದೇವಸ್ಥಾನದ ಜಾಗ ಆಮೇಲೆ ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬಂದಿದ್ದು, ಎಲ್ಲೆಲ್ಲಿ ದೇವಸ್ಥಾನದ ವಠಾರವಿದೆ ಅಲ್ಲಿ ಹಿಂದುಗಳೇ ವ್ಯಾಪಾರ ಮಾಡಬೇಕು, ಎಂದಿದ್ದಾರೆ. ಹಿಂದೂ ಶಬ್ದದ ಮೇಲೇನೆ ನಂಬಿಕೆ ಇಲ್ಲದವರು,ಮೂರ್ತಿ ಪೂಜೆಯನ್ನ ನಂಬದವರು ನಮ್ಮ ಧರ್ಮವನ್ನ ಪ್ರಶ್ನೆ ಮಾಡುವವರು,ಸನಾತನ ಧರ್ಮದ ಬಗ್ಗೆನೇ ವಿರೋಧ ವ್ಯಕ್ತ ಪಡಿಸುವವರು ಹಿಂದೂ ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದರೆ ಅದು ಅರ್ಥವಿಲ್ಲದ ಹೇಳಿಕೆ ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago