Featured

ಮಂಗಳೂರು: ಮಂಗಳಾದೇವಿ ನವರಾತ್ರಿ ಉತ್ಸವ – ಸಂತೆಯ ಹಿಂದೂ ವ್ಯಾಪಾರಿಗಳ ಸ್ಟಾಲ್‌ಗಳಿಗೆ ಕೇಸರಿ ಧ್ವಜ ಕಟ್ಟಿದ ಬಜರಂಗದಳ..Vishwanews24

ಮಂಗಳೂರು: ಮಂಗಳಾದೇವಿ ನವರಾತ್ರಿ ಉತ್ಸವ – ಸಂತೆಯ ಹಿಂದೂ ವ್ಯಾಪಾರಿಗಳ ಸ್ಟಾಲ್‌ಗಳಿಗೆ ಕೇಸರಿ ಧ್ವಜ ಕಟ್ಟಿದ ಬಜರಂಗದಳ..

ಮಂಗಳೂರು: ಹಿಂದೂ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ದ.ಕ.ಜಿಲ್ಲಾಡಳಿತ ನಗರದ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ಸಂತೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ಅವಕಾಶ ನೀಡಿದೆ.

ಜಿಲ್ಲಾಡಳಿತದ ಈ ನಿರ್ಧಾರ ಹೀಮಧೂ ಸಂಘಟನೆಗಳ ಕಣ್ಣು ಕೆಂಪಾಗಿರಿಸಿದೆ. ಇದಕ್ಕೆ ಟಕ್ಕರ್ ನೀಡಲು ಹಿಂದೂಗಳು ನಡೆಸುವ ಸ್ಟಾಲ್‌ಗಳಿಗೆ ಕೇಸರಿ ಧ್ವಜ ಗಳನ್ನು ಕಟ್ಟಿ ಹಿಂದೂಗಳು ಈ ಅಂಗಡಿಯಲ್ಲಿ ವ್ಯಾಪಾರ ಮಾಡಬೇಕೆಂದು ಕರೆ ನೀಡಿದೆ. ಈ ಬಗ್ಗೆ ಪ್ರತಿಕ್ರೀಯಿಸಿರುವ ವಿಎಚ್ ಪಿ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ದೇವಸ್ಥಾನದ ಆಸುಪಾಸಿನಲ್ಲಿ ಹಿಂದೂಗಳಿಗೆ ಅವಕಾಶ ನೀಡಬೇಕು. ಹಿಂದೂ ದೇವರನ್ನು ನಂಬದ, ಮೂರ್ತಿ ಪೂಜೆ ವಿರೋಧಿಗಳಿಗೆ ನಮ್ಮ ಉತ್ಸವದಲ್ಲಿ ಯಾಕೆ ಅವಕಾಶ ಕೊಡಬೇಕು, ಜಿಲ್ಲಾಡಳಿತದ ಈ ನೀತಿ ಹಿಂದೂ ವಿರೋಧಿಯಾಗಿದೆ.

ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರುವ ದೇವಸ್ಥಾನದಲ್ಲಿ ಹಿಂದೂಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬೇಕು, ನಾವೂ ಮುಸಲ್ಮಾನ್ ವ್ಯಾಪಾರಿಗಳ ವಿರೋಧಗಳಲ್ಲ ನಮ್ಮ ದೇವಸ್ಥಾನದ ಸುತ್ತ ಮುತ್ತ ಮೊದಲು ಹಿಂದುಗಳಿಗೆ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದಿದ್ದಾರೆ. ಈ ಹಿಂದೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಿಸಿದ ಸಂದರ್ಭ, ಬೀದಿ ಬದಿ ವ್ಯಾಪಾರಸ್ಥರ ಸಮನ್ವಯ ಸಮಿತಿ ದೇವಸ್ಥಾನದ ಎರಡು ಬದಿಯ ರಸ್ತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ್ದು, ಇಲ್ಲಿ ಯಾರು ಬೇಕಾದರೂ ವ್ಯಾಪಾರ ನಡೆಸಬಹುದು ಎಂದಿತ್ತು, ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬರುವ ನೂರಾರು ವರ್ಷಗಳ ಮುನ್ನವೇ ಈ ಜಾಗದಲ್ಲಿ ದೇವಸ್ಥಾನವಿತ್ತು.

ಇದೇ ರಸ್ತೆಯಲ್ಲಿ ದೇವರ ರಥ ಓಡಾಡುತ್ತೆ,ಮೊದಲು ಇದು ದೇವಸ್ಥಾನದ ಜಾಗ ಆಮೇಲೆ ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬಂದಿದ್ದು, ಎಲ್ಲೆಲ್ಲಿ ದೇವಸ್ಥಾನದ ವಠಾರವಿದೆ ಅಲ್ಲಿ ಹಿಂದುಗಳೇ ವ್ಯಾಪಾರ ಮಾಡಬೇಕು, ಎಂದಿದ್ದಾರೆ. ಹಿಂದೂ ಶಬ್ದದ ಮೇಲೇನೆ ನಂಬಿಕೆ ಇಲ್ಲದವರು,ಮೂರ್ತಿ ಪೂಜೆಯನ್ನ ನಂಬದವರು ನಮ್ಮ ಧರ್ಮವನ್ನ ಪ್ರಶ್ನೆ ಮಾಡುವವರು,ಸನಾತನ ಧರ್ಮದ ಬಗ್ಗೆನೇ ವಿರೋಧ ವ್ಯಕ್ತ ಪಡಿಸುವವರು ಹಿಂದೂ ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದರೆ ಅದು ಅರ್ಥವಿಲ್ಲದ ಹೇಳಿಕೆ ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago