ಉಳ್ಳಾಲ: ಮೀನುಗಾರಿಕೆಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ದೋಣಿ ಮಗುಚಿದೆ. ಪರಿಣಾಮ 6 ಮಂದಿ ನಾಪತ್ತೆಯಾಗಿದ್ದಾರೆ.
ಈ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಬೋಳಾರ ಮೂಲದ ಶ್ರೀರಕ್ಷಾ ಎಂಬ ಬೋಟ್ ದುರಂತಕ್ಕೀಡಾಗಿದೆ. ಮಂಗಳೂರಿನ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದಾಳದ ಮೀನುಗಾರಿಕೆಗೆ ನಿನ್ನೆ ಸೋಮವಾರ (ನ. 30) ಈ ಬೋಟ್ ತೆರಳಿತ್ತು. ಮೀನು ತುಂಬಿಕೊಂಡು ವಾಪಸ್ ಬರುವಾಗ ಗಾಳಿಗೆ ಮಗುಚಿಕೊಂಡು ಬಿದ್ದಿದೆ.
ಸೋಮವಾರ ನಸುಕಿನ ಜಾವ ಬೋಳಾರದ ಶ್ರೀ ರಕ್ಷಾ ಮೀನುಗಾರಿಕಾ ಬೋಟ್ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು ರಾತ್ರಿ ವಾಪಾಸ್ ಬರಬೇಕಾಗಿತ್ತು. ಆದರೆ ಉಳ್ಳಾಲದ ಪಶ್ಚಿಮ ಭಾಗದ ಹಲವು ನಾಟಿಕಲ್ ಮೈಲ್ ದೂರದಲ್ಲಿ ದೋಣಿ ಮಗುಚಿ ಬಿದ್ದಿದೆ.
ಇತರೆ ಮೀನುಗಾರಿಕಾ ಬೋಟ್ನವರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು 14 ಮಂದಿ ಡೆಂಗೀ ಮೂಲಕ ದಡ ಸೇರುತ್ತಿದ್ದರೆ 6 ಮಂದಿ ನಾಪತ್ತೆಯಾಗಿದ್ದಾರೆ.
ಮೀನಿನ ಸಂಗ್ರಹ ಅಧಿಕವಾದ ಹಾಗೂ ಭಾರೀ ಗಾಳಿ ಬೀಸಿದ ಪರಿಣಾಮ ಈ ದೋಣಿ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…
CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…
ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…