Featured

ಮಂಗಳೂರು:  ಮಗುಚಿ ಬಿದ್ದ ಮೀನುಗಾರಿಕೆ ದೋಣಿ – ಆರು ಮಂದಿ ನಾಪತ್ತೆ -Vishwanews24

ಮಂಗಳೂರು:  ಮಗುಚಿ ಬಿದ್ದ ಮೀನುಗಾರಿಕೆ ದೋಣಿ – ಆರು ಮಂದಿ ನಾಪತ್ತೆ

ಉಳ್ಳಾಲ: ಮೀನುಗಾರಿಕೆಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ದೋಣಿ ಮಗುಚಿದೆ. ಪರಿಣಾಮ 6 ಮಂದಿ ನಾಪತ್ತೆಯಾಗಿದ್ದಾರೆ‌.

ಈ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಬೋಳಾರ ಮೂಲದ ಶ್ರೀರಕ್ಷಾ ಎಂಬ ಬೋಟ್ ದುರಂತಕ್ಕೀಡಾಗಿದೆ. ಮಂಗಳೂರಿನ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದಾಳದ ಮೀನುಗಾರಿಕೆಗೆ ನಿನ್ನೆ ಸೋಮವಾರ (ನ. 30) ಈ ಬೋಟ್ ತೆರಳಿತ್ತು. ಮೀನು ತುಂಬಿಕೊಂಡು ವಾಪಸ್ ಬರುವಾಗ ಗಾಳಿಗೆ ಮಗುಚಿಕೊಂಡು ಬಿದ್ದಿದೆ.

ಸೋಮವಾರ ನಸುಕಿನ ಜಾವ ಬೋಳಾರದ ಶ್ರೀ ರಕ್ಷಾ ಮೀನುಗಾರಿಕಾ ಬೋಟ್‌ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು ರಾತ್ರಿ ವಾಪಾಸ್‌ ಬರಬೇಕಾಗಿತ್ತು. ಆದರೆ ಉಳ್ಳಾಲದ ಪಶ್ಚಿಮ ಭಾಗದ ಹಲವು ನಾಟಿಕಲ್ ಮೈಲ್ ದೂರದಲ್ಲಿ ದೋಣಿ ಮಗುಚಿ ಬಿದ್ದಿದೆ.

ಇತರೆ ಮೀನುಗಾರಿಕಾ ಬೋಟ್‌ನವರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು 14 ಮಂದಿ ಡೆಂಗೀ ಮೂಲಕ ದಡ ಸೇರುತ್ತಿದ್ದರೆ 6 ಮಂದಿ ನಾಪತ್ತೆಯಾಗಿದ್ದಾರೆ.

ಮೀನಿನ ಸಂಗ್ರಹ ಅಧಿಕವಾದ ಹಾಗೂ ಭಾರೀ ಗಾಳಿ ಬೀಸಿದ ಪರಿಣಾಮ ಈ ದೋಣಿ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

48 minutes ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

1 hour ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

1 hour ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

3 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

3 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago