ಮಂಗಳೂರು: ಪೊಲೀಸರು ನಿಲ್ಲಿಸಲು ಸೂಚಿಸಿದ್ದಕ್ಕೆ ಹೆದರಿ ರಸ್ತೆ ಬದಿಯಿಂದ ಚಲಿಸಲೆತ್ನಿಸಿದಾಗ ಲಾರಿ ಪಲ್ಟಿಯಾಗಿದ್ದು, ಪರಿಣಾಮ ಕ್ಲೀನರ್ ಮೃತಪಟ್ಟಿರುವ ಘಟನೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಮೂಲದ ನಿವಾಸಿ ವಸಂತ್ ಕುಮಾರ್ (25) ಮೃತ ವ್ಯಕ್ತಿ. ಟ್ರಾಫಿಕ್ ಪೊಲೀಸರು ಓವರ್ ಬ್ರಿಡ್ಜ್ ಕಾಮಗಾರಿ ನಡುವೆ ಲಾರಿಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಆರೋಪಿಸಿ ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ತೊಕ್ಕೊಟ್ಟು ಜಂಕ್ಷನ್ ಬಳಿ ಟ್ರಾಫಿಕ್ ಪೊಲೀಸರು ಲಾರಿ ನಿಲ್ಲಿಸಿ ಕೇಸ್ ಹಾಕಲು ಮುಂದಾದಾಗ ಚಾಲಕ ಲಾರಿ ನಿಲ್ಲಿಸದೆ ರಸ್ತೆ ಬದಿಗೆ ತೆರಳಿದ ಸಂದರ್ಭ ಲಾರಿ ಚಕ್ರ ಒಳಚಂರಡಿಗೆ ಸಿಕ್ಕಿ ಲಾರಿ ಮಗುಚಿ ಬಿದ್ದಿದೆ. ಈ ಸಂದರ್ಭ ಲಾರಿ ಕ್ಲೀನರ್ ಬಿದ್ದ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ತೊಕ್ಕೊಟ್ಟು ಜಂಕ್ಷನ್ ನಲ್ಲಿ ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುವ ಟ್ರಾಪಿಕ್ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಎರಡು ಗಂಟೆಗಳ ಕಾಲ ನೂರಾರು ನೂರಾರು ಮಂದಿ ಪ್ರತಿಭಟನೆ ನಡೆಸಿದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…