Featured

ಮಂಗಳೂರು: ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ ; ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ಎರಡು ಜೀವ – vishwanews24

ಮಂಗಳೂರು: ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ ; ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ಎರಡು ಜೀವ

ಮಂಗಳೂರು: ಮಗುವಿನೊಂದಿಗೆ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಎರಡು ಜೀವಗಳನ್ನು ಉಳಿಸಿದ್ದಾರೆ.

ಕಾವೂರು ಠಾಣಾ ವ್ಯಾಪ್ತಿಯ ಅಂಬಿಕಾನಗರದ 35 ವರ್ಷದ ನಿವಾಸಿಯೊಬ್ಬರು ತಮ್ಮ ಮಗುವಿನೊಂದಿಗೆ ಮಂಗಳವಾರ ಸಂಜೆ ಪಣಂಬೂರು ಸಮುದ್ರ ತೀರಕ್ಕೆ ಬಂದಿದ್ದರು. ಬಳಿಕ ಮಗುವಿನೊಂದಿಗೆ ‘ನಾವಿಬ್ಬರೂ ಸಾಯೋಣ’ ಎಂದು ಹೇಳುತ್ತಾ ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ತನ್ನ ಅಕ್ಕನಿಗೆ ಕಳುಹಿಸಿದ್ದರು. ಬಳಿಕ ಅವರು ಅದನ್ನು ಪೊಲೀಸರಿಗೆ ಕಳುಹಿಸಿದ್ದರು. ಈ ವಿಡಿಯೋ ಗಮನಿಸಿದ ಬಳಿಕ ಪಣಂಬೂರು ಪೊಲೀಸರು ಬೀಚ್‌ನಲ್ಲಿ ಎಲ್ಲಾ ಕಡೆ ತಂದೆ, ಮಗುವನ್ನು ಹುಡುಕಾಡಿದ್ದಾರೆ. ಆದರೆ ಅಲ್ಲಿ ಅವರು ಸಿಗದಿದ್ದ ಕಾರಣ ಆತನ ಮನೆಯನ್ನು ಹುಡುಕಾಡಿ ಮನೆಯತ್ತ ಬಂದಿದ್ದಾರೆ.

ಪಣಂಬೂರು ಪೊಲೀಸರು ಮನೆಗೆ ಬಂದಾಗ ವ್ಯಕ್ತಿಯು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸುತ್ತಿದ್ದ. ಅದೇ ಸಮಯದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬಾಗಿಲು ಮುರಿದು ಆತ ಹಾಗೂ ಪುತ್ರಿಯನ್ನು ರಕ್ಷಿಸಿದ್ದಾರೆ. ಬಳಿಕ ಇಬ್ಬರನ್ನೂ ಕಾವೂರು ಠಾಣೆಯ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ಆತನಿಗೆ ತಿಳಿಹೇಳಿ ಮನೆಗೆ ಕಳುಹಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರ ಮಾಹಿತಿ: ಘಟನೆ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ”ವಿಡಿಯೋ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರ ತಂಡವು ಎಲ್ಲಾ ಬೀಚ್ ಮತ್ತು ಎಲ್ಲಾ ಸ್ಥಳಗಳಲ್ಲಿ ಇವರನ್ನು ಹುಡುಕುವಲ್ಲಿ ನಿರತವಾಗಿತ್ತು. ಪೊಲೀಸರು ಅವರನ್ನು ರಕ್ಷಿಸಲು ಸಮಯಕ್ಕೆ ಸರಿಯಾಗಿ ಬೀಚ್​ನತ್ತ ಬಂದಿದ್ದರಿಂದ ಅವನು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತೋರುತ್ತದೆ. ಆ ಸ್ಥಳದಿಂದ ಆತ ಹೊರಟುಹೋಗಿದ್ದ. ನಂತರ ಪೊಲೀಸರು ಮನೆಗೆ ಹೋಗಿದ್ದಾರೆ. ಮನೆಯಲ್ಲಿ ಆತ್ಮಹತ್ಯೆ ಮುಂದಾಗಿರುವ ಸಂದರ್ಭದಲ್ಲಿ ಪೊಲೀಸರು ತಡೆದರು” ಎಂದು ತಿಳಿಸಿದ್ದಾರೆ.

 

Vishwa News 24

Recent Posts

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 hour ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 hour ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

1 hour ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

23 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

24 hours ago