ಮಂಗಳೂರು: ಮಗುವಿನೊಂದಿಗೆ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಎರಡು ಜೀವಗಳನ್ನು ಉಳಿಸಿದ್ದಾರೆ.
ಕಾವೂರು ಠಾಣಾ ವ್ಯಾಪ್ತಿಯ ಅಂಬಿಕಾನಗರದ 35 ವರ್ಷದ ನಿವಾಸಿಯೊಬ್ಬರು ತಮ್ಮ ಮಗುವಿನೊಂದಿಗೆ ಮಂಗಳವಾರ ಸಂಜೆ ಪಣಂಬೂರು ಸಮುದ್ರ ತೀರಕ್ಕೆ ಬಂದಿದ್ದರು. ಬಳಿಕ ಮಗುವಿನೊಂದಿಗೆ ‘ನಾವಿಬ್ಬರೂ ಸಾಯೋಣ’ ಎಂದು ಹೇಳುತ್ತಾ ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ತನ್ನ ಅಕ್ಕನಿಗೆ ಕಳುಹಿಸಿದ್ದರು. ಬಳಿಕ ಅವರು ಅದನ್ನು ಪೊಲೀಸರಿಗೆ ಕಳುಹಿಸಿದ್ದರು. ಈ ವಿಡಿಯೋ ಗಮನಿಸಿದ ಬಳಿಕ ಪಣಂಬೂರು ಪೊಲೀಸರು ಬೀಚ್ನಲ್ಲಿ ಎಲ್ಲಾ ಕಡೆ ತಂದೆ, ಮಗುವನ್ನು ಹುಡುಕಾಡಿದ್ದಾರೆ. ಆದರೆ ಅಲ್ಲಿ ಅವರು ಸಿಗದಿದ್ದ ಕಾರಣ ಆತನ ಮನೆಯನ್ನು ಹುಡುಕಾಡಿ ಮನೆಯತ್ತ ಬಂದಿದ್ದಾರೆ.
ಪಣಂಬೂರು ಪೊಲೀಸರು ಮನೆಗೆ ಬಂದಾಗ ವ್ಯಕ್ತಿಯು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸುತ್ತಿದ್ದ. ಅದೇ ಸಮಯದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬಾಗಿಲು ಮುರಿದು ಆತ ಹಾಗೂ ಪುತ್ರಿಯನ್ನು ರಕ್ಷಿಸಿದ್ದಾರೆ. ಬಳಿಕ ಇಬ್ಬರನ್ನೂ ಕಾವೂರು ಠಾಣೆಯ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ಆತನಿಗೆ ತಿಳಿಹೇಳಿ ಮನೆಗೆ ಕಳುಹಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ಮಾಹಿತಿ: ಘಟನೆ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ”ವಿಡಿಯೋ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರ ತಂಡವು ಎಲ್ಲಾ ಬೀಚ್ ಮತ್ತು ಎಲ್ಲಾ ಸ್ಥಳಗಳಲ್ಲಿ ಇವರನ್ನು ಹುಡುಕುವಲ್ಲಿ ನಿರತವಾಗಿತ್ತು. ಪೊಲೀಸರು ಅವರನ್ನು ರಕ್ಷಿಸಲು ಸಮಯಕ್ಕೆ ಸರಿಯಾಗಿ ಬೀಚ್ನತ್ತ ಬಂದಿದ್ದರಿಂದ ಅವನು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತೋರುತ್ತದೆ. ಆ ಸ್ಥಳದಿಂದ ಆತ ಹೊರಟುಹೋಗಿದ್ದ. ನಂತರ ಪೊಲೀಸರು ಮನೆಗೆ ಹೋಗಿದ್ದಾರೆ. ಮನೆಯಲ್ಲಿ ಆತ್ಮಹತ್ಯೆ ಮುಂದಾಗಿರುವ ಸಂದರ್ಭದಲ್ಲಿ ಪೊಲೀಸರು ತಡೆದರು” ಎಂದು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…