ಮಂಗಳೂರು: ಮಗುವಿನೊಂದಿಗೆ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಎರಡು ಜೀವಗಳನ್ನು ಉಳಿಸಿದ್ದಾರೆ.
ಕಾವೂರು ಠಾಣಾ ವ್ಯಾಪ್ತಿಯ ಅಂಬಿಕಾನಗರದ 35 ವರ್ಷದ ನಿವಾಸಿಯೊಬ್ಬರು ತಮ್ಮ ಮಗುವಿನೊಂದಿಗೆ ಮಂಗಳವಾರ ಸಂಜೆ ಪಣಂಬೂರು ಸಮುದ್ರ ತೀರಕ್ಕೆ ಬಂದಿದ್ದರು. ಬಳಿಕ ಮಗುವಿನೊಂದಿಗೆ ‘ನಾವಿಬ್ಬರೂ ಸಾಯೋಣ’ ಎಂದು ಹೇಳುತ್ತಾ ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ತನ್ನ ಅಕ್ಕನಿಗೆ ಕಳುಹಿಸಿದ್ದರು. ಬಳಿಕ ಅವರು ಅದನ್ನು ಪೊಲೀಸರಿಗೆ ಕಳುಹಿಸಿದ್ದರು. ಈ ವಿಡಿಯೋ ಗಮನಿಸಿದ ಬಳಿಕ ಪಣಂಬೂರು ಪೊಲೀಸರು ಬೀಚ್ನಲ್ಲಿ ಎಲ್ಲಾ ಕಡೆ ತಂದೆ, ಮಗುವನ್ನು ಹುಡುಕಾಡಿದ್ದಾರೆ. ಆದರೆ ಅಲ್ಲಿ ಅವರು ಸಿಗದಿದ್ದ ಕಾರಣ ಆತನ ಮನೆಯನ್ನು ಹುಡುಕಾಡಿ ಮನೆಯತ್ತ ಬಂದಿದ್ದಾರೆ.
ಪಣಂಬೂರು ಪೊಲೀಸರು ಮನೆಗೆ ಬಂದಾಗ ವ್ಯಕ್ತಿಯು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸುತ್ತಿದ್ದ. ಅದೇ ಸಮಯದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬಾಗಿಲು ಮುರಿದು ಆತ ಹಾಗೂ ಪುತ್ರಿಯನ್ನು ರಕ್ಷಿಸಿದ್ದಾರೆ. ಬಳಿಕ ಇಬ್ಬರನ್ನೂ ಕಾವೂರು ಠಾಣೆಯ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ಆತನಿಗೆ ತಿಳಿಹೇಳಿ ಮನೆಗೆ ಕಳುಹಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ಮಾಹಿತಿ: ಘಟನೆ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ”ವಿಡಿಯೋ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರ ತಂಡವು ಎಲ್ಲಾ ಬೀಚ್ ಮತ್ತು ಎಲ್ಲಾ ಸ್ಥಳಗಳಲ್ಲಿ ಇವರನ್ನು ಹುಡುಕುವಲ್ಲಿ ನಿರತವಾಗಿತ್ತು. ಪೊಲೀಸರು ಅವರನ್ನು ರಕ್ಷಿಸಲು ಸಮಯಕ್ಕೆ ಸರಿಯಾಗಿ ಬೀಚ್ನತ್ತ ಬಂದಿದ್ದರಿಂದ ಅವನು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತೋರುತ್ತದೆ. ಆ ಸ್ಥಳದಿಂದ ಆತ ಹೊರಟುಹೋಗಿದ್ದ. ನಂತರ ಪೊಲೀಸರು ಮನೆಗೆ ಹೋಗಿದ್ದಾರೆ. ಮನೆಯಲ್ಲಿ ಆತ್ಮಹತ್ಯೆ ಮುಂದಾಗಿರುವ ಸಂದರ್ಭದಲ್ಲಿ ಪೊಲೀಸರು ತಡೆದರು” ಎಂದು ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…