Featured

ಮಂಗಳೂರು: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನ ಪತ್ತೆ – vishwanews24

ಮಂಗಳೂರು: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನ ಪತ್ತೆ

ಸಾವು-ನೋವುಗಳಿಂದ ತೊಂದರೆಗೀಡಾಗಿದ್ದ ಗ್ರಾಮಸ್ಥರಿಗೆ ಪ್ರಶ್ನಾಚಿಂತನೆಯಲ್ಲಿ ಸುಳಿವು

ತುಳುನಾಡಿನ ದೈವ ಪವಾಡದ ಮತ್ತೊಂದು ಅಚ್ಚರಿಯ ವಿದ್ಯಮಾನ

ಮಂಗಳೂರು: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನವೊಂದು ಪತ್ತೆಯಾಗಿದ್ದು, ತುಳುನಾಡಿನ ಕಾರ್ಣಿಕ ದೈವದ ಇರುವಿಕೆ ಕಂಡು ಗ್ರಾಮಸ್ಥರು ಬೆಚ್ಚಿಬೀಳುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ನೀರುಮಾರ್ಗದ ಪೆದಮಲೆ ಗ್ರಾಮದಲ್ಲೊಂದು ಅಚ್ಚರಿಯ ವಿದ್ಯಮಾನ ನಡೆದಿದ್ದು, ದೈವದ ಮುನಿಸಿನಿಂದ ತೊಂದರೆಗೀಡಾದ ಗ್ರಾಮಸ್ಥರಿಗೆ ಪ್ರಶ್ನಾಚಿಂತನೆಯಲ್ಲಿ ದೈವಸ್ಥಾನದ ಸುಳಿವು ದೊರೆತಿದೆ.

300 ವರ್ಷಗಳಿಂದ ದೈವಸ್ಥಾನ ಗ್ರಾಮದ ಜನರ ಅರಿವಿಗೆ ಬಾರದೇ ಮಣ್ಣಿನಡಿ ಹುದುಗಿತ್ತು. ಪಾಳು ಬಿದ್ದು ಪೊದೆಗಳಿಂದ ಅವೃತ್ತವಾಗಿದ್ದ ದಟ್ಟ ನಿರ್ಜನ ಪ್ರದೇಶದಲ್ಲಿ ಗ್ರಾಮದ ಇಂದಿನ ಪೀಳಿಗೆಗೆ ದೈವಸ್ಥಾನ ಇದ್ದ ಬಗ್ಗೆ ಅರಿವೇ ಇರಲಿಲ್ಲ. ಆದರೆ, ಇದೀಗ ವಾಜಿಲ್ಲಾಯ-ಧೂಮವತಿ ದೈವದ ಕಾರ್ಣಿಕ ಕಂಡು ಗ್ರಾಮಸ್ಥರು ಅಚ್ಚರಿಪಟ್ಟಿದ್ದಾರೆ.

ಗ್ರಾಮದಲ್ಲಿ ಹೆಚ್ಚಿದ್ದ ಸಾವು-ನೋವು
ಗ್ರಾಮದಲ್ಲಿ ಮನೆಗಳಿಗೆ ಆಗಾಗ ನಾಗರಹಾವು ಪ್ರವೇಶಿಸುವುದು, ಆತ್ಮಹತ್ಯೆ, ಸಾವು-ನೋವು ಹೆಚ್ಚಳವಾಗಿತ್ತು. ನಿರಂತರ ನೆಮ್ಮದಿ ಇಲ್ಲದೇ ಹಲವು ಮನೆಯವರು ಗ್ರಾಮವನ್ನೇ ತೊರೆದಿದ್ದರು. ಹೀಗಾಗಿ ಪಾಳು ಬಿದ್ದಿದ್ದ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಗ್ರಾಮಸ್ಥರು ಮುಂದಾಗಿದ್ದರು. ಈ ವೇಳೆ ದೇವಸ್ಥಾನದಲ್ಲಿ ಪ್ರಶ್ನಾಚಿಂತನೆ ನಡೆಸಲಾಗಿತ್ತು. ಅದರಲ್ಲಿ, ವಾಜಿಲ್ಲಾಯ ದೈವಸ್ಥಾನದ ಸುಳಿವು ಪತ್ತೆಯಾಗಿದೆ.

ಪ್ರಶ್ನಾ ಚಿಂತನೆಯಲ್ಲಿ ಸಿಕ್ಕ ಸುಳಿವು
ದೇಗುಲದ ಉತ್ತರ ದಿಕ್ಕಿನ ನಾಗಬನದ ಬಳಿ ವಾಜಿಲ್ಲಾಯ ದೈವಸ್ಥಾನ ಇರುವ ಸುಳಿವುದ ದೊರೆತಿದೆ. ನೂರಾರು ವರ್ಷಗಳ ಹಿಂದೆ ದೈವಾರಾಧನೆ ನಡೆಯುತ್ತಿದ್ದ ಸುಳಿವು ದೊರೆತಿದೆ. ಹೀಗಾಗಿ ನಾಗಬನದ ಸುತ್ತಲಿನ 50 ಸೆಂಟ್ಸ್ ಜಾಗದಲ್ಲಿ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಆಗ ದೈವಸ್ಥಾನದ ಕುರುಹು ಪತ್ತೆಯಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಸಂಪೂರ್ಣ ಶಿಥಿಲಗೊಂಡ ರೀತಿಯಲ್ಲಿ ದೈವಸ್ಥಾನದ ಸುತ್ತುಪೌಳಿ ಹಾಗೂ ಗುಡಿಯ ಪಂಚಾಂಗ ಪತ್ತೆಯಾಗಿದೆ. ಜನಸಂಚಾರವಿಲ್ಲದೆ ಶತಮಾನವೇ ಕಳೆದಿದ್ದ ಖಾಸಗಿ ವ್ಯಕ್ತಿಗಳಿಗೆ ಸೇರಿದ್ದ ಜಾಗ ಅದಾಗಿದೆ. ದೈವಸ್ಥಾನದ ಧ್ವಜ ಸ್ಥಂಭದ ಬುಡವೊಂದರ ದಂಬೆ ಕಲ್ಲು ಕೂಡ ಪತ್ತೆಯಾಗಿದೆ. ಒಂದು ಬದಿ ಕುದುರೆ ಮೇಲೆ ರಾಜನೊಬ್ಬನ ಕೆತ್ತನೆ ಹಾಗೂ ಇನ್ನೊಂದು ಬದಿ ಸೂರ್ಯ ಚಂದ್ರರ ಕೆತ್ತನೆಯ ಕಲ್ಲು ಕಾಣಿಸಿದೆ. ಜೊತೆಗೆ ಮಣ್ಣಿನಡಿ ಗಂಟೆ ಸೇರಿದಂತೆ ಹಲವು ದೈವಾರಾಧನೆ ಪರಿಕರಗಳು ಪತ್ತೆಯಾಗಿವೆ.

Vishwa News 24

Recent Posts

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

59 seconds ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

10 minutes ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

18 minutes ago

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…

28 minutes ago

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

40 minutes ago

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

48 minutes ago