Featured

ಮಂಗಳೂರು: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನ ಪತ್ತೆ – vishwanews24

ಮಂಗಳೂರು: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನ ಪತ್ತೆ

ಸಾವು-ನೋವುಗಳಿಂದ ತೊಂದರೆಗೀಡಾಗಿದ್ದ ಗ್ರಾಮಸ್ಥರಿಗೆ ಪ್ರಶ್ನಾಚಿಂತನೆಯಲ್ಲಿ ಸುಳಿವು

ತುಳುನಾಡಿನ ದೈವ ಪವಾಡದ ಮತ್ತೊಂದು ಅಚ್ಚರಿಯ ವಿದ್ಯಮಾನ

ಮಂಗಳೂರು: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನವೊಂದು ಪತ್ತೆಯಾಗಿದ್ದು, ತುಳುನಾಡಿನ ಕಾರ್ಣಿಕ ದೈವದ ಇರುವಿಕೆ ಕಂಡು ಗ್ರಾಮಸ್ಥರು ಬೆಚ್ಚಿಬೀಳುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ನೀರುಮಾರ್ಗದ ಪೆದಮಲೆ ಗ್ರಾಮದಲ್ಲೊಂದು ಅಚ್ಚರಿಯ ವಿದ್ಯಮಾನ ನಡೆದಿದ್ದು, ದೈವದ ಮುನಿಸಿನಿಂದ ತೊಂದರೆಗೀಡಾದ ಗ್ರಾಮಸ್ಥರಿಗೆ ಪ್ರಶ್ನಾಚಿಂತನೆಯಲ್ಲಿ ದೈವಸ್ಥಾನದ ಸುಳಿವು ದೊರೆತಿದೆ.

300 ವರ್ಷಗಳಿಂದ ದೈವಸ್ಥಾನ ಗ್ರಾಮದ ಜನರ ಅರಿವಿಗೆ ಬಾರದೇ ಮಣ್ಣಿನಡಿ ಹುದುಗಿತ್ತು. ಪಾಳು ಬಿದ್ದು ಪೊದೆಗಳಿಂದ ಅವೃತ್ತವಾಗಿದ್ದ ದಟ್ಟ ನಿರ್ಜನ ಪ್ರದೇಶದಲ್ಲಿ ಗ್ರಾಮದ ಇಂದಿನ ಪೀಳಿಗೆಗೆ ದೈವಸ್ಥಾನ ಇದ್ದ ಬಗ್ಗೆ ಅರಿವೇ ಇರಲಿಲ್ಲ. ಆದರೆ, ಇದೀಗ ವಾಜಿಲ್ಲಾಯ-ಧೂಮವತಿ ದೈವದ ಕಾರ್ಣಿಕ ಕಂಡು ಗ್ರಾಮಸ್ಥರು ಅಚ್ಚರಿಪಟ್ಟಿದ್ದಾರೆ.

ಗ್ರಾಮದಲ್ಲಿ ಹೆಚ್ಚಿದ್ದ ಸಾವು-ನೋವು
ಗ್ರಾಮದಲ್ಲಿ ಮನೆಗಳಿಗೆ ಆಗಾಗ ನಾಗರಹಾವು ಪ್ರವೇಶಿಸುವುದು, ಆತ್ಮಹತ್ಯೆ, ಸಾವು-ನೋವು ಹೆಚ್ಚಳವಾಗಿತ್ತು. ನಿರಂತರ ನೆಮ್ಮದಿ ಇಲ್ಲದೇ ಹಲವು ಮನೆಯವರು ಗ್ರಾಮವನ್ನೇ ತೊರೆದಿದ್ದರು. ಹೀಗಾಗಿ ಪಾಳು ಬಿದ್ದಿದ್ದ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಗ್ರಾಮಸ್ಥರು ಮುಂದಾಗಿದ್ದರು. ಈ ವೇಳೆ ದೇವಸ್ಥಾನದಲ್ಲಿ ಪ್ರಶ್ನಾಚಿಂತನೆ ನಡೆಸಲಾಗಿತ್ತು. ಅದರಲ್ಲಿ, ವಾಜಿಲ್ಲಾಯ ದೈವಸ್ಥಾನದ ಸುಳಿವು ಪತ್ತೆಯಾಗಿದೆ.

ಪ್ರಶ್ನಾ ಚಿಂತನೆಯಲ್ಲಿ ಸಿಕ್ಕ ಸುಳಿವು
ದೇಗುಲದ ಉತ್ತರ ದಿಕ್ಕಿನ ನಾಗಬನದ ಬಳಿ ವಾಜಿಲ್ಲಾಯ ದೈವಸ್ಥಾನ ಇರುವ ಸುಳಿವುದ ದೊರೆತಿದೆ. ನೂರಾರು ವರ್ಷಗಳ ಹಿಂದೆ ದೈವಾರಾಧನೆ ನಡೆಯುತ್ತಿದ್ದ ಸುಳಿವು ದೊರೆತಿದೆ. ಹೀಗಾಗಿ ನಾಗಬನದ ಸುತ್ತಲಿನ 50 ಸೆಂಟ್ಸ್ ಜಾಗದಲ್ಲಿ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಆಗ ದೈವಸ್ಥಾನದ ಕುರುಹು ಪತ್ತೆಯಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಸಂಪೂರ್ಣ ಶಿಥಿಲಗೊಂಡ ರೀತಿಯಲ್ಲಿ ದೈವಸ್ಥಾನದ ಸುತ್ತುಪೌಳಿ ಹಾಗೂ ಗುಡಿಯ ಪಂಚಾಂಗ ಪತ್ತೆಯಾಗಿದೆ. ಜನಸಂಚಾರವಿಲ್ಲದೆ ಶತಮಾನವೇ ಕಳೆದಿದ್ದ ಖಾಸಗಿ ವ್ಯಕ್ತಿಗಳಿಗೆ ಸೇರಿದ್ದ ಜಾಗ ಅದಾಗಿದೆ. ದೈವಸ್ಥಾನದ ಧ್ವಜ ಸ್ಥಂಭದ ಬುಡವೊಂದರ ದಂಬೆ ಕಲ್ಲು ಕೂಡ ಪತ್ತೆಯಾಗಿದೆ. ಒಂದು ಬದಿ ಕುದುರೆ ಮೇಲೆ ರಾಜನೊಬ್ಬನ ಕೆತ್ತನೆ ಹಾಗೂ ಇನ್ನೊಂದು ಬದಿ ಸೂರ್ಯ ಚಂದ್ರರ ಕೆತ್ತನೆಯ ಕಲ್ಲು ಕಾಣಿಸಿದೆ. ಜೊತೆಗೆ ಮಣ್ಣಿನಡಿ ಗಂಟೆ ಸೇರಿದಂತೆ ಹಲವು ದೈವಾರಾಧನೆ ಪರಿಕರಗಳು ಪತ್ತೆಯಾಗಿವೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

8 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

8 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

8 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

9 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

9 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

11 hours ago