Featured

ಮಂಗಳೂರು ಮಣ್ಣು ಕುಸಿತ ಪ್ರಕರಣ : ನಾಲ್ವರ ಮೇಲೆ ಎಫ್ಐಆರ್ – vishwanews24

ಮಂಗಳೂರು ಮಣ್ಣು ಕುಸಿತ ಪ್ರಕರಣ – ನಾಲ್ವರ ಮೇಲೆ ಎಫ್ಐಆರ್ ; ಕಟ್ಟಡ ಪರವಾನಗಿ ಅಮಾನತು

ಮಂಗಳೂರು : ಬಲ್ಮಠದಲ್ಲಿ ಉದ್ಯಮಿ ರೋಹನ್ ಮೊಂತೆರೊ ಅವರ ಮಾಲಕತ್ವದಲ್ಲಿ ನಿರ್ಮಾಣವಾಗುತ್ತಿದ್ದ ರೋಹನ್ ಸ್ಯೂಟ್ಸ್ ಕಮರ್ಷಿಯಲ್ ಆ್ಯಂಡ್ ಫುಲ್ಲಿ ಫರ್ನಿಷ್ಡ್ ಸ್ಟುಡಿಯೊ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಕಾರ್ಮಿಕ ಸಾವನಪ್ಪಿದ್ದು. ಈ ದುರ್ಘಟನೆ ಸಂಬಂಧ ಕಾಮಗಾರಿಯ ಗುತ್ತಿಗೆದಾರ ಹಾಗೂ ಮೂವರು ಮೇಲ್ವಿಚಾರಕರು ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ನಗರ ಪೂರ್ವ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ದುರ್ಘಟನೆ ನಡೆದ ಸ್ಥಳದಲ್ಲಿ 5282.79 ಚ.ಮೀ ವಿಸ್ತೀರ್ಣದ ಕಟ್ಟಡ ನಿರ್ಮಿಸಲು ರೋಹನ್ ಮೊಂತೆರೊ ಅವರು ಪಾಲಿಕೆಯಿಂದ 2024ರ ಮೇ 30ರಂದು ಪರವಾನಗಿ ಪಡೆದಿದ್ದರು. ಮಳೆಗಾಲದಲ್ಲಿ ನೆಲಮಟ್ಟದಿಂದ ಆಳಕ್ಕೆ ಅಗೆದು ಯಾವುದೇ ಕಾಮಗಾರಿ ನಡೆಸಬಾರದು ಎಂದು ಪಾಲಿಕೆ ಸೂಚನೆ ನೀಡಿದ್ದರೂ ಇಲ್ಲಿ ಕಾಮಗಾರಿ ನಡೆಸಲಾಗಿದೆ. ಈ ಕಾಮಗಾರಿಯಿಂದಾಗಿಯೇ ಮಣ್ಣು ಕುಸಿತ ಉಂಟಾಗಿದೆ. ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಹಾಗಾಗಿ ಈ ಕಟ್ಟಡ ನಿರ್ಮಾಣಕ್ಕೆ ನೀಡಲಾದ ಪರವಾನಗಿಯನ್ನು ಮುಂದಿನ ಆದೇಶದವರೆಗೆ ಅಮಾನತು ಮಾಡಲಾಗಿದೆ’ ಎಂದು ಪಾಲಿಕೆ ಆಯುಕ್ತರು ಆದೇಶ ಮಾಡಿದ್ದಾರೆ. ‘ಈ ಕಟ್ಟಡದ ಕಾಮಗಾರಿಯನ್ನು ಮುಂದುವರಿಸಬಾರದು. ಕಾಮಗಾರಿಯ ಸ್ಥಳದಲ್ಲಿ ಬಂದೋಬಸ್ತ್‌ ಕೈಗೊಳ್ಳಬೇಕು. ಸ್ಥಳಕ್ಕೆ ಯಾರೂ ಪ್ರವೇಶಿಸದಂತೆ ನೊಡಿಕೊಳ್ಳಬೇಕು’ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago