ಮಂಗಳೂರು: ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ ; ವಿದ್ಯಾರ್ಥಿ ಗುಂಪುಗಳ ಮಧ್ಯೆ ವಾಗ್ವಾದ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ ; ವಿದ್ಯಾರ್ಥಿ ಗುಂಪುಗಳ ಮಧ್ಯೆ ವಾಗ್ವಾದ – Vishwanews24

ಮಂಗಳೂರು: ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್‌ಸ್ಟ್ರೀಟ್‌ನಲ್ಲಿರುವ ಡಾ.ಪಿ.ದಯಾನಂದ ಪ್ರ – ಪಿ. ಸತೀಶ್ ಪ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ

ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿತ್ತು. ಇಂದು ಪ್ರಾಂಶುಪಾಲರ ಅನುಮತಿ ಮೇರೆಗೆ ವಿದ್ಯಾರ್ಥಿನಿಯರು ಪಿನ್ ಹಾಕದೇ ಕೇವಲ ಶಾಲು ಧರಿಸಿ ಪರೀಕ್ಷೆಗೆ ಹಾಜರಾಗಿದ್ದರು.

ಆದರೆ, ಕೆಲ ವಿದ್ಯಾರ್ಥಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅವರನ್ನು ಪರೀಕ್ಷಾ ತರಗತಿಯಿಂದ ಹೊರಹೋಗಲು ತಿಳಿಸಿದ್ದಾರೆ. ಪರಿಣಾಮ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ವಾಗ್ವಾದ ಉಂಟಾಗಿದೆ.

ಕಾಲೇಜು ಗೇಟು ಮುಂಭಾಗದಲ್ಲೇ ಪರಸ್ಪರ ಜಗಳಕ್ಕಿಳಿದಿದ್ದಾರೆ.

ಪೊಲೀಸರು ಮಧ್ಯ ಪ್ರವೇಶಿಸಿದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ. ಪ್ರಾಂಶುಪಾಲರ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆದಿದ್ದು, ಪರಿಸ್ಥಿತಿ ತಿಳಿಯಾಗಿದೆ.

ಉಡುಪಿ : ಸರ್ವ ಸ್ಪರ್ಶಿ ಸರ್ವ ವ್ಯಾಪಿ ಧ್ಯೇಯದ ಜನಪರ ಬಜೆಟ್: ಯಶ್ ಪಾಲ್ ಸುವರ್ಣ – Vishwanews24

Leave a Reply