ಮಂಗಳೂರು: ಮನೆಯಲ್ಲಿ ಅಕ್ರಮವಾಗಿ ಸಿಲಿಂಡರ್ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಪ್ರಕರಣವನ್ನು ಬಯಲಿಗೆಳೆದಿರುವ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು, 1, 92,000 ಲಕ್ಷ ರೂ. ಮೌಲ್ಯದ ಗ್ಯಾಸ್ ತುಂಬಿಸಲು ಬಳಸುತ್ತಿದ್ದ ಪರಿಕರ ಸೇರಿದಂತೆ ವಿವಿಧ ಕಂಪನಿಗಳ 128 ಸಿಲಿಂಡರ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೆರ್ಮನ್ನೂರು ಗಾರಮದ ಚೆಂಬುಗುಡ್ಡ ಎಂಬಲ್ಲಿನ ನಿವಾಸಿ ಫ್ರಾನ್ಸಿಸ್ ಎಂಬವರು ತಮ್ಮ ಮನೆಯ ಬಳಿ ತಗಡು ಶೀಟಿನಿಂದ ನಿರ್ಮಿಸಿದ ಕೋಣೆಯಲ್ಲಿ ಮನೆ ಬಳಕೆ ಸಿಲಿಂಡರ್ ನಿಂದ ಖಾಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗೆ ತಾನೇ ಕೃತಕವಾಗಿ ರೆಗ್ಯುಲೇಟರ್ ಮುಖೇನ ಗ್ಯಾಸ್ ರಿಫಿಲ್ಲಿಂಗ್ ಮಾಡಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸ್ ಠಾಣಾ ಸಂದೀಪ್ ಹಾಗೂ ತಂಡ ಮತ್ತು ಉಳ್ಳಾಲ ವಲಯ ಆಹಾರ ನಿರೀಕ್ಷಕರಾದ ಹ್ಯಾರಿಸ್ ಮತ್ತವರ ತಂಡ ದಾಳಿ ನಡೆಸಿದೆ.
ದಾಳಿ ವೇಳೆ, ಖಾಲಿ ಗ್ಯಾಸ್ ಸಿಲಿಂಡರ್ ನ್ನು ನೆಲದ ಮೇಲೆ ಇರಿಸಿ , ಅದರ ಮೇಲೆ ತುಂಬಿದ ಗ್ಯಾಸ್ ಸಿಲಿಂಡರ್ ನನ್ನು ಕವುಚಿ ಹಾಕಿ ಪೈಪ್ ಮುಖೇನ ಕೃತಕವಾಗಿ ತುಂಬಿಸುತ್ತಿದ್ದು, ಆರೋಪಿ ಪ್ರಾನ್ಸಿಸಿ ಸ್ಥಳದಿಂದ ಓಡಿ ಪರಾರಿಯಾಗಿದ್ದಾನೆ.
ಉಳ್ಳಾಲ ವಲಯ ಆಹಾರ ನಿರೀಕ್ಷಕರು ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…