ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು, ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಅನಾಮಿಕ ಚೌರಾಸಿ(8) , ಪರಿ(3) ಶಾಂತ, (46 ) ಮೃತಪಟ್ಟವರು . ರಕ್ಷಣಾ ಕಾರ್ಯದಲ್ಲಿ ಬದುಕಿ ಉಳಿದವರು ಅಲ್ಕಾ (14) ಅನುಷಾ( 11), ಬಾಲಕೃಷ್ಣ( 48) ಎಂದು ಗುರುತಿಸಲಾಗಿದೆ.
ಗರೋಡಿಯ ಮಾರಿಯಲ್ ಹೌಸ್ನಲ್ಲಿ ಬೆಳಿಗ್ಗೆ 4.45 ರಿಂದ 5.00 ರ ನಡುವೆ ಈ ಘಟನೆ ಸಂಭವಿಸಿದ್ದು, ನಿರಂತರ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದಿದೆ. ನಾಲ್ಕು ಕುಟುಂಬಗಳು ಕಾಂಪೌಂಡ್ ಗೋಡೆಯ ಕೆಳಗೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರು.
ಬಿಹಾರ ಮೂಲದ ಲಾಲ್ಬಾಬು ಅವರ ಕುಟುಂಬವೂ ಕಳೆದ ಎಂಟು ವರ್ಷಗಳಿಂದ ತಮ್ಮ ಪತ್ನಿ ಮತ್ತು ಅವರ ನಾಲ್ವರು ಹೆಣ್ಣುಮಕ್ಕಳಾದ ಅಲ್ಕಾ (14), ಅನುಷಾ (11), ಅನಾಮಿಕಾ ಚೌರಾಸಿಯಾ (8), ಮತ್ತು ಪರಿ (4) ಅವರೊಂದಿಗೆ ಆ ಮನೆಯಲ್ಲಿ ವಾಸಿಸುತ್ತಿದ್ದರು. ಘಟನೆಯಲ್ಲಿ ಲಾಲ್ಬಾಬು ಅವರ ಕುಟುಂಬದ ಅಲ್ಕಾ ಮತ್ತು ಅನುಷಾ ಅವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆದರೆ , ಅನಾಮಿಕಾ ಚೌರಾಸಿಯಾ (8) ಮತ್ತು ಪರಿ (4) ಅವರನ್ನು ಅವಶೇಷಗಳ ಅಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದವರನ್ನು ಹೊರತೆಗೆಯಲಾಗಿದೆ. ಆದರೆ ಅವರಿಬ್ಬರು ಮೃತಪಟ್ಟಿದ್ದಾರೆ .
ಎರಡನೇ ಕುಟುಂಬ ಬಾಲಕೃಷ್ಣ (48) ಅವರದ್ದಾಗಿದ್ದು, ಅವರು ಮೂಲತಃ ಬಿಹಾರದವರಾಗಿದ್ದು, ಕಳೆದ 20 ವರ್ಷಗಳಿಂದ ಕಂಕನಾಡಿ ಗ್ರಾಮದ ಕಂಕನಾಡಿ ಪೊಲೀಸ್ ಠಾಣೆಯ ಹಿಂದೆ ವಾಸಿಸುತ್ತಿದ್ದಾರೆ. ಅವರನ್ನು ರಕ್ಷಿಸಲಾಗಿದೆ. ಆದರೆ ಅವರ ಪತ್ನಿ ಶಾಂತಾ (46) ಅವಶೇಷಗಳ ಅಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ನಂತರ ಅವರು ಸಾವನ್ನಪ್ಪಿದರು ಎಂದು ವರಿಯಾಗಿದೆ.
ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. ಈ ಪೈಕಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದಂತೆ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ದರ್ಶನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…