Featured

ಮಂಗಳೂರು: ‘ಮರವೂರು ಸೇತುವೆ ದುರಸ್ತಿ ಅಥವಾ ಪುನರ್ ನಿರ್ಮಾಣ ಶೀಘ್ರದಲ್ಲೇ ನಿರ್ಧಾರ’ : ಸಚಿವ ಕೋಟ -Vishwanews24

ಮಂಗಳೂರು: ‘ಮರವೂರು ಸೇತುವೆ ದುರಸ್ತಿ ಅಥವಾ ಪುನರ್ ನಿರ್ಮಾಣ ಶೀಘ್ರದಲ್ಲೇ ನಿರ್ಧಾರ’ : ಸಚಿವ ಕೋಟ -Vishwanews24

ಮಂಗಳೂರು : “ಮರವೂರು ಸೇತುವೆಯ ಮೇಲೆ ಹಾದು ಹೋಗುವ ರಸ್ತೆಯು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಈ ಸೇತುವೆಯ ಪುನರ್ ನಿರ್ಮಾಣ ಮಾಡಬೇಕೆ ಅಥವಾ ದುರಸ್ತಿ ಕೈಗೊಳ್ಳಬೇಕೆ ಎನ್ನುವುದಕ್ಕೆ ತಜ್ಞರನ್ನೊಳಗೊಂಡ ಸಮಿತಿಯು ಪರಿಶೀಲಿಸಿ ಇನ್ನೆರೆಡು ದಿನದೊಳಗೆ ವರದಿ ನೀಡಲಿದೆ. ವರದಿಯನ್ನಾಧರಿಸಿ, ದುರಸ್ತಿ ಅಥವಾ ಪುನರ್ ನಿರ್ಮಾಣದ ಬಗ್ಗೆ ಅಗತ್ಯವಿರುವ ಅನುದಾನವನ್ನು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮರವೂರು ಸೇತುವೆ ಬಿರುಕು ಕಾಣಿಸಿಕೊಂಡಿರುವ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, “ಅತ್ರಾಡಿ ರಾಷ್ಟ್ರೀಯ ಹೆದ್ದಾರಿ-67 ರಸ್ತೆಯಲ್ಲಿರುವ ಮರವೂರು ಸೇತುವೆಯ ಪಿಲ್ಲರ್ 8 ಜೂನ್ 14 ರ ರಾತ್ರಿಯ ಸಮಯದಲ್ಲಿ ಕುಸಿದ ಹಿನ್ನೆಲೆ ಸೇತುವೆಯಲ್ಲಿ ಬಿರುಕು ಕಂಡಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸದರಿ ಸೇತುವೆಯ ಮೇಲೆ ವಾಹನ ಸಂಚಾರ ಯೋಗ್ಯವಲ್ಲದ ಕಾರಣ ಸ್ಥಗಿತಗೊಳಿಸಲಾಗಿದೆ” ಎಂದರು.

“ಈ ರಸ್ತೆಯ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾತಿಯಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸೇತುವೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಮುಂಬರುವ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

“ನಾಲ್ಕು ಪಥದ ರಸ್ತೆಯ ಟೆಂಡರ್‌‌ನಲ್ಲಿ ಹಳೆ ಸೇತುವೆಯನ್ನು ದುರಸ್ಥಿಪಡಿಸಲು ಯೋಜನೆಯನ್ನು ರೂಪಿಸಲಾಯಿತು. ಸೇತುವೆಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸೇತುವೆ ತಪಾಸಣಾ ತಂಡ ಪ್ಲಾನಿಂಗ್ ಆ್ಯಂಡ್ ರೋಡ್ ಆಸ್ಸೆಟ್ ಮ್ಯಾನೇಜ್‍ಮೆಂಟ್ ಸೆಂಟರ್ ವತಿಯಿಂದ ಈಗಾಗಲೇ ಪರಿಶೀಲಿಸಿರುತ್ತಾರೆ. ಹಳೆಯ ಸೇತುವೆ ದುರಸ್ತಿಗೆ 3 ತಿಂಗಳುಗಳ ಕಾಲ ವಾಹನ ಸಂಚಾರ ಸ್ಥಗಿತಗೊಳಿಸಬೇಕಾಗಿರುವುದರಿಂದ ಹೊಸ ಸೇತುವೆ ನಿರ್ಮಾಣಗೊಂಡ ನಂತರವೇ ಹಳೇ ಸೇತುವೆಯ ದುರಸ್ತಿ ಕಾರ್ಯಕೈಗೊಳ್ಳಲು ಉದ್ದೇಶಿಸಲಾಗಿತ್ತು, ಈಗ ತಜ್ಞರ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು” ಎಂದರು.

“ಸೇತುವೆ ಕುಸಿದು ವಾಹನ ಸಂಚಾರ ನಿರ್ಬಂಧಿಸಿದ ಹಿನ್ನೆಲೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ಮಾರ್ಗವಾಗಿ ಉಡುಪಿ ಕಡೆಯಿಂದ ಮುಲ್ಕಿ-ಮೂರುಕಾವೇರಿ-ಕಟೀಲು ಮುಖಾಂತರ, ಬಜ್ಪೆಗೆ ಹಾಗೂ ಮಂಗಳೂರು ಕಡೆಯಿಂದ ಮರವೂರು ದ್ವಾರದಿಂದ ಪೊರ್ಕೋಡಿ-ಜೋಕಟ್ಟೆ – ಬೈಕಂಪಾಡಿ ರಸ್ತೆ ಮತ್ತು ಕೈಕಂಬ – ಅದ್ಯಪಾಡಿ ರಸ್ತೆ ಅಥವಾ ಕೈಕಂಬ – ಬಜಪೆ ರಸ್ತೆ ಮಾರ್ಗವಾಗಿ, ಸುರತ್ಕಲ್ – ಮಂಗಳಪೇಟೆ -ಬಜಪೆ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ” ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago