Featured

ಮಂಗಳೂರು: ‘ಮರವೂರು ಸೇತುವೆ ದುರಸ್ತಿ ಅಥವಾ ಪುನರ್ ನಿರ್ಮಾಣ ಶೀಘ್ರದಲ್ಲೇ ನಿರ್ಧಾರ’ : ಸಚಿವ ಕೋಟ -Vishwanews24

ಮಂಗಳೂರು: ‘ಮರವೂರು ಸೇತುವೆ ದುರಸ್ತಿ ಅಥವಾ ಪುನರ್ ನಿರ್ಮಾಣ ಶೀಘ್ರದಲ್ಲೇ ನಿರ್ಧಾರ’ : ಸಚಿವ ಕೋಟ -Vishwanews24

ಮಂಗಳೂರು : “ಮರವೂರು ಸೇತುವೆಯ ಮೇಲೆ ಹಾದು ಹೋಗುವ ರಸ್ತೆಯು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಈ ಸೇತುವೆಯ ಪುನರ್ ನಿರ್ಮಾಣ ಮಾಡಬೇಕೆ ಅಥವಾ ದುರಸ್ತಿ ಕೈಗೊಳ್ಳಬೇಕೆ ಎನ್ನುವುದಕ್ಕೆ ತಜ್ಞರನ್ನೊಳಗೊಂಡ ಸಮಿತಿಯು ಪರಿಶೀಲಿಸಿ ಇನ್ನೆರೆಡು ದಿನದೊಳಗೆ ವರದಿ ನೀಡಲಿದೆ. ವರದಿಯನ್ನಾಧರಿಸಿ, ದುರಸ್ತಿ ಅಥವಾ ಪುನರ್ ನಿರ್ಮಾಣದ ಬಗ್ಗೆ ಅಗತ್ಯವಿರುವ ಅನುದಾನವನ್ನು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮರವೂರು ಸೇತುವೆ ಬಿರುಕು ಕಾಣಿಸಿಕೊಂಡಿರುವ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, “ಅತ್ರಾಡಿ ರಾಷ್ಟ್ರೀಯ ಹೆದ್ದಾರಿ-67 ರಸ್ತೆಯಲ್ಲಿರುವ ಮರವೂರು ಸೇತುವೆಯ ಪಿಲ್ಲರ್ 8 ಜೂನ್ 14 ರ ರಾತ್ರಿಯ ಸಮಯದಲ್ಲಿ ಕುಸಿದ ಹಿನ್ನೆಲೆ ಸೇತುವೆಯಲ್ಲಿ ಬಿರುಕು ಕಂಡಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸದರಿ ಸೇತುವೆಯ ಮೇಲೆ ವಾಹನ ಸಂಚಾರ ಯೋಗ್ಯವಲ್ಲದ ಕಾರಣ ಸ್ಥಗಿತಗೊಳಿಸಲಾಗಿದೆ” ಎಂದರು.

“ಈ ರಸ್ತೆಯ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾತಿಯಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸೇತುವೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಮುಂಬರುವ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

“ನಾಲ್ಕು ಪಥದ ರಸ್ತೆಯ ಟೆಂಡರ್‌‌ನಲ್ಲಿ ಹಳೆ ಸೇತುವೆಯನ್ನು ದುರಸ್ಥಿಪಡಿಸಲು ಯೋಜನೆಯನ್ನು ರೂಪಿಸಲಾಯಿತು. ಸೇತುವೆಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸೇತುವೆ ತಪಾಸಣಾ ತಂಡ ಪ್ಲಾನಿಂಗ್ ಆ್ಯಂಡ್ ರೋಡ್ ಆಸ್ಸೆಟ್ ಮ್ಯಾನೇಜ್‍ಮೆಂಟ್ ಸೆಂಟರ್ ವತಿಯಿಂದ ಈಗಾಗಲೇ ಪರಿಶೀಲಿಸಿರುತ್ತಾರೆ. ಹಳೆಯ ಸೇತುವೆ ದುರಸ್ತಿಗೆ 3 ತಿಂಗಳುಗಳ ಕಾಲ ವಾಹನ ಸಂಚಾರ ಸ್ಥಗಿತಗೊಳಿಸಬೇಕಾಗಿರುವುದರಿಂದ ಹೊಸ ಸೇತುವೆ ನಿರ್ಮಾಣಗೊಂಡ ನಂತರವೇ ಹಳೇ ಸೇತುವೆಯ ದುರಸ್ತಿ ಕಾರ್ಯಕೈಗೊಳ್ಳಲು ಉದ್ದೇಶಿಸಲಾಗಿತ್ತು, ಈಗ ತಜ್ಞರ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು” ಎಂದರು.

“ಸೇತುವೆ ಕುಸಿದು ವಾಹನ ಸಂಚಾರ ನಿರ್ಬಂಧಿಸಿದ ಹಿನ್ನೆಲೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ಮಾರ್ಗವಾಗಿ ಉಡುಪಿ ಕಡೆಯಿಂದ ಮುಲ್ಕಿ-ಮೂರುಕಾವೇರಿ-ಕಟೀಲು ಮುಖಾಂತರ, ಬಜ್ಪೆಗೆ ಹಾಗೂ ಮಂಗಳೂರು ಕಡೆಯಿಂದ ಮರವೂರು ದ್ವಾರದಿಂದ ಪೊರ್ಕೋಡಿ-ಜೋಕಟ್ಟೆ – ಬೈಕಂಪಾಡಿ ರಸ್ತೆ ಮತ್ತು ಕೈಕಂಬ – ಅದ್ಯಪಾಡಿ ರಸ್ತೆ ಅಥವಾ ಕೈಕಂಬ – ಬಜಪೆ ರಸ್ತೆ ಮಾರ್ಗವಾಗಿ, ಸುರತ್ಕಲ್ – ಮಂಗಳಪೇಟೆ -ಬಜಪೆ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ” ಎಂದರು.

Vishwa News 24

Recent Posts

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

4 minutes ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

37 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

41 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago